ಬಿಜೆಪಿ ಯುವ ಮೊರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ವಿರೂಪಾಕ್ಷ ಭಟ್ ಮಚ್ಚಿಮಲೆ

0

ಪುತ್ತೂರು: ದ.ಕ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ನ್ಯಾಯವಾದಿ ವಿರೂಪಾಕ್ಷ ಭಟ್ ಮಚ್ಚಿಮಲೆಯವರನ್ನು ನೇಮಕಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶಿಸಿದ್ದಾರೆ.
ಆರ್ಯಾಪು ಗ್ರಾಮದ ಮಚ್ಚಿಮಲೆ‌ ನಿವಾಸಿಯಾಗಿರುವ ಇವರು ಕಾನೂನು ಪಧವೀಧರರಾಗಿದ್ದು ಪ್ರಸ್ತುತ ಪುತ್ತೂರಿನಲ್ಲಿ ವಕೀಲ ವೃತ್ತಿಯನ್ನು ನಡೆಸುತ್ತಿರುತ್ತಾರೆ. ಇವರು ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಪುತ್ತೂರು ನಗರ ಸಂಚಾಲಕ, ಜಿಲ್ಲಾ ಸಂಚಾಲಕ, ಮಂಗಳೂರು ವಿಭಾಗ ಸಂಚಾಲಕರಾಗಿ, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಪುತ್ತೂರು ತಾಲೂಕಿನ ಹಿಂದೂ ಎಕನಾಮಿಕ್ ಫಾರಂ ಇದರ ಕಾರ್ಯದರ್ಶಿ, ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿರುತ್ತಾರೆ. ಕುಂಜೂರುಪಂಜ ಶ್ರೀದುರ್ಗಾ ಭಜನಾಮಂದಿರ ಸೇವಾ ಸಮಿತಿ ಸದಸ್ಯರು, ಕುಂಜೂರುಪಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೀರ್ತನಾ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪ್ರಸ್ತುತ  ಗೌರವಾಧ್ಯಕ್ಷರಾಗಿ ಸೇರಿದಂತರ ಇನ್ನಿತರ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here