ವಿಟ್ಲ: ಇಡ್ಕಿದು ಗ್ರಾಮದ ಅಳಕೆಮಜಲು ಅಶೋಕನಗರದ ಶ್ರೀ ಶಾರದಾಂಬ ಭಜನಾ ಮಂದಿರದ ನೂತನ ಕಟ್ಟಡ ಕಾಮಗಾರಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಅದರ ಚೆಕ್ ಅನ್ನು ಮಾಣಿ ವಲಯದ ಮೇಲ್ವಿಚಾರಕಿ ಆಶಾಪಾರ್ವತಿರವರು ಭಜನಾ ಮಂಡಳಿಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಭಜನಾ ಮಂದಿರದ ಗೌರವ ಸಲಹೆಗಾರರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಧ್ಯಕ್ಷರಾದ ಜಗದೀಶ್ ಅಳಕೆಮಜಲು, ಪ್ರಧಾನ ಕಾರ್ಯದರ್ಶಿ ತಿರುಮಲೇಶ್ವರ, ಅಳಕೆಮಜಲು ಒಕ್ಕೂಟದ ಅಧ್ಯಕ್ಷರಾದ ಚಂದ್ರಹಾಸ, ಸೇವಾಪ್ರತಿನಿಧಿ ಸುಗಂಧಿನಿ ಉಪಸ್ಥಿತರಿದ್ದರು.
Home ಆರ್ಥಿಕ ನೆರವು ಅಳಕೆಮಜಲು ಅಶೋಕನಗರದ ಶ್ರೀ ಶಾರದಾಂಬ ಭಜನಾ ಮಂದಿರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಅನುದಾನ ಬಿಡುಗಡೆ