ಮಾ.2: ಪಡುಮಲೆ ದೇವಾಲಯದಲ್ಲಿ ಪ್ರತಿಷ್ಠಾ ವರ್ಧಂತಿ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಮತ್ತು ಸಪರಿವಾರ ದೇವರುಗಳ ಪ್ರತಿಷ್ಠಾ ವರ್ಧಂತಿಯು ಮಾ.2ರಂದು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.

ಬೆಳಗ್ಗೆ 7 ಗಂಟೆಯಿಂದ 12 ತೆಂಗಿನಕಾಯಿ ಗಣಪತಿ ಹೋಮ, ಶ್ರೀ ಗಣಪತಿ ದೇವರಿಗೆ ದೂರ್ವಾರ್ಚನೆ, ಗಣಹೋಮದ ಪೂರ್ಣಾಹುತಿ, ಶ್ರೀ ದೇವರಿಗೆ ಲಕ್ಷಾರ್ಚನೆ, ಶ್ರೀ ಶಾಸ್ತಾರ ದೇವರಿಗೆ ಬಿಲ್ವಾರ್ಚನೆ ಮತ್ತು ರುದ್ರಪಾರಾಯಣ, ಶ್ರೀ ನಾಗದೇವರಿಗೆ ಸೀಯಾಳಾಭಿಷೇಕ ಮತ್ತು ತಂಬಿಲ ಸೇವೆ,12ರಿಂದ  ಲಕ್ಷಾರ್ಚನೆಯ ಮಹಾಮಂಗಳಾರತಿ, ನವಕಾಭಿಷೇಕ, ಶ್ರೀ ರಾಜೇಶ್ವರೀ ದೇವಿಗೆ ಅಭಿಷೇಕ ಮತ್ತು ಅಲಂಕಾರ ಪೂಜೆ, ಮಹಾಪೂಜೆಯ ಬಳಿಕ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ, ರಾತ್ರಿ ಮಂಗಳಾರತಿ, ಕಾರ್ತಿಕ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ತೆಲಿಕೆದ ಕಲಾವಿದೆರ್ ಕೊಯಿಲ ಇವರಿಂದ ಗೆಂದಗಿಡಿ ನಾಟಕ ಪ್ರದರ್ಶನ ನಡೆಯಲಿದೆ.

LEAVE A REPLY

Please enter your comment!
Please enter your name here