ಪರ್ಲಡ್ಕ ಬೈಪಾಸ್ ನಲ್ಲಿ ಬೈಕ್ ಸ್ಕಿಡ್ ನಲ್ಲಿ ಗಾಯಗೊಂಡ ಮೆಕ್ಯಾನಿಕ್ ಸ್ಥಿತಿ ಚಿಂತಾಜನಕ-ಪುತ್ತೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಚಿಕಿತ್ಸೆ ನೀಡದ ಆರೋಪ-ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಊರವರು

0

ಪುತ್ತೂರು: ಪರ್ಲಡ್ಕ ಬೈಪಾಸ್ ಬಳಿ ಫೆ.29 ರಂದು ಬೈಕ್ ಸ್ಕಿಡ್ ಆಗಿ ಗಾಯಗೊಂಡ ಮೆಕ್ಯಾನಿಕ್ ಶಾಂತಿಗೋಡಿನ ಯುವಕನ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಯ ವೆಂಟಿಲೇಟರ್ ನಲ್ಲಿರುವ ಯುವಕನಿಗೆ ಪುತ್ತೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಪ್ರಥಮ ಚಿಕಿತ್ಸೆ ನೀಡಿಲ್ಲ ಎಂದು ಊರವರು ಪುತ್ತೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ.

ಶಾಂತಿಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪುತ್ತೂರು ಬೈಪಾಸ್ ರಸ್ತೆಯ ಗ್ಯಾರೆಜೊಂದರಲ್ಲಿ ಮೇಕಾನಿಕ್ ಆಗಿರುವ ಪ್ರಸಾದ್ (27ವ ) ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವವರು. ಇದೀಗ ಪುತ್ತೂರು ನಗರ ಪೊಲೀಸ್ ಠಾಣೆಗೆ ಆಸ್ಪತ್ರೆ ವೈದ್ಯರು ಆಗಮಿಸಿ ಇನ್ ಸ್ಪೆಕ್ಡರ್ ಜೊತೆ ಮಾತುಕತೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here