ಸುಂದರ ಶೆಟ್ಟಿಯವರು ಎಎಸ್‌ಐ ಆಗಿ ಭಡ್ತಿ-ಸುಳ್ಯ ಠಾಣೆಗೆ ವರ್ಗಾವಣೆ

0

ನೆಲ್ಯಾಡಿ: ಬೆಳ್ತಂಗಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೆಲ್ಯಾಡಿ ನಿವಾಸಿ ಸುಂದರ ಶೆಟ್ಟಿಯವರು ಎಎಸ್‌ಐ ಆಗಿ ಭಡ್ತಿಗೊಂಡು ಸುಳ್ಯ ನಗರ ಠಾಣೆಗೆ ವರ್ಗಾವಣೆಗೊಂಡು ಫೆ.29ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಸುಂದರ ಶೆಟ್ಟಿ ಅವರು 1996ರಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಸೇವೆಗೆ ಸೇರ್ಪಡೆಗೊಂಡಿದ್ದರು. ಬಳಿಕ ಮಂಗಳೂರು ಠಾಣೆಗೆ ವರ್ಗಾವಣೆಗೊಂಡಿದ್ದರು. 2014ರಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಭಡ್ತಿಗೊಂಡು ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡಿದ್ದರು. ನಂತರ ಗುಪ್ತವಾರ್ತೆ, ಅರಣ್ಯ ಸಂಚಾರಿದಳದಲ್ಲಿ ಕರ್ತವ್ಯ ನಿರ್ವಹಿಸಿ ಬೆಳ್ತಂಗಡಿ ಠಾಣೆಗೆ ವರ್ಗಾವಣೆಯಾಗಿದ್ದರು. ಇದೀಗ ಎಎಸ್‌ಐ ಆಗಿ ಭಡ್ತಿಗೊಂಡು ಸುಳ್ಯ ಠಾಣೆಗೆ ವರ್ಗಾವಣೆಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸುಂದರ ಶೆಟ್ಟಿಯವರಿಗೆ ಅಪರಾಧ ಪತ್ತೆಗಾಗಿ ಜಿಲ್ಲಾ ಮಟ್ಟದ ಪ್ರಶಸ್ತಿಯೂ ಲಭಿಸಿತ್ತು. ಸುಂದರ ಶೆಟ್ಟಿ ಅವರು ನೆಲ್ಯಾಡಿ ಗ್ರಾಮದ ಬೆದ್ರುಮಾರು ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here