ಅಜ್ಜಿಕಲ್ಲು ಶ್ರೀ ಶಕ್ತಿ ಜಟಾಧಾರಿ ಭಜನಾ ಮಂದಿರದ ಪುನರ್‌ನಿರ್ಮಾಣ- ಶ್ರೀ ದೇವರ ಬೆಳ್ಳಿ ಉಬ್ಬು ಚಿತ್ರಕ್ಕೆ ಬೆಳ್ಳಿ ಸಮರ್ಪಣೆ

0

ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಶ್ರೀ ಶಕಿ ಜಟಾಧಾರಿ ಭಜನಾ ಮಂದಿರದ ಪುನರ್‌ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಂದಿರದಲ್ಲಿ ದೇವರನ್ನು ಬೆಳ್ಳಿಯ ಉಬ್ಬು ಚಿತ್ರದಲ್ಲಿ ಆರಾಧಿಸಬೇಕೆಂಬ ಚಿಂತನೆಯಂತೆ ಮಾ.3ರಂದು ಶ್ರೀ ದೇವರ ಬೆಳ್ಳಿ ಉಬ್ಬು ಚಿತ್ರಕ್ಕೆ ಬೆಳ್ಳಿ ಸಮರ್ಪಣೆ ಕಾರ್ಯಕ್ರಮ ನಡೆಯಿತು.


ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಬೆಳ್ಳಿ ಸಮರ್ಪಣೆಗೆ ಚಾಲನೆ ನೀಡಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಅಜಿತ್ ರೈ ಹೊಸಮನೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here