ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ವಿದ್ಯಾರ್ಥಿಗಳಲ್ಲೂ ಭಯದ ವಾತಾವರಣ- ಸಂಜೀವ ಮಠಂದೂರು

0

ಪುತ್ತೂರು: ಕಡಬ ಶಾಲಾ ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣದಿಂದ ಮಕ್ಕಳ ಮೇಲೂ ರಾಜಾರೋಷವಾಗಿ ಆಕ್ರಮಗಳು ನಡೆಯುತ್ತಿರುವುದು ಕಂಡು ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.


ಯಾವುದೋ ವ್ಯಕ್ತಿ ಶಾಲೆಯ ಸಮವಸ್ತ್ರ ಧರಿಸಿ ಮುಖಕ್ಕೆ ಮುಸುಕು ಹಾಕಿ ಶಾಲೆಯ ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚುವುದು ಎಂದಾದರೆ ಮಕ್ಕಳಲ್ಲಿ ಇವತ್ತು ಭಯದ ವಾತಾವರಣ ಸೃಷ್ಟಿಯಾಗಿದೆ. ಪರೀಕ್ಷಾ ಸಮಯದಲ್ಲಿ ಇಂತಹ ಘಟನೆ ಮಕ್ಕಳಲ್ಲಿ ಇನ್ನೂ ಹೆಚ್ಚಿನ ಆತಂಕ ಸೃಷ್ಠಿ ಮಾಡುತ್ತಿದೆ. ಆರೋಪಿಯ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸುತ್ತಾ ಪೊಲೀಸರು ಆರೋಪಿಯ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಬೇಕು. ಪ್ರತಿ ಶಾಲೆಗೂ ಭದ್ರತೆ ಒದಗಿಸುವ ಕುರಿತು ಸರಕಾರವನ್ನು, ಪೊಲೀಸ್ ಇಲಾಖೆಯನ್ನು ಮತ್ತು ಶಿಕ್ಷಣ ಇಲಾಖೆಯನ್ನು ಒತ್ತಾಯಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here