ಕಾವು ಸರಕಾರಿ ಶಾಲೆಯಲ್ಲಿ‌ ಪಲ್ಸ್ ಪೋಲಿಯೋ-ಶಾಸಕ ಅಶೋಕ್‌ ರೈ ಭಾಗಿ

0

ಪುತ್ತೂರು: ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮಾ.3ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದ್ದು, ಕಾವು ಸರಕಾರಿ ಶಾಲೆಯಲ್ಲಿ‌ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಭಾಗವಹಿಸಿದರು.

ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ಕೆಲವು ದೇಶಗಳಲ್ಲಿ ಪೋಲಿಯೋ ಮರುಕಳಿಸಿದೆ. ಭಾರತದಲ್ಲಿಯೂ ಮರುಕಳಿಸುವ ಸಾಧ್ಯತೆಗಳಿರುವುದರಿಂದ ದೇಶದಾದ್ಯಂತ ಮಾ.3ರಂದು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ವಿರುದ್ಧ ಭಾರತ ಸಾಧಿಸಿದ ಗೆಲುವನ್ನು ಮುಂದುವರಿಸಲು ಪ್ರಯತ್ನಿಸಲಾಗಿದೆ. ಈ ಸಂದರ್ಭದಲ್ಲಿ ಕಾವು ಹೇಮನಾಥ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here