ಮಾ.8: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ರಂಗಪೂಜೆ, ದೈವಗಳ ನೇಮೋತ್ಸವ -ಶ್ರೀ ವಿಷ್ಣುಮೂರ್ತಿ ಮಹಾದ್ವಾರದ ಲೋಕಾರ್ಪಣೆ

0

ನೆಲ್ಯಾಡಿ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಡುಬೆಟ್ಟು -ನೆಲ್ಯಾಡಿ ಇಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ರಂಗಪೂಜೆ, ದೈವಗಳ ನೇಮೋತ್ಸವ ಹಾಗೂ ಶ್ರೀ ವಿಷ್ಣುಮೂರ್ತಿ ಮಹಾದ್ವಾರದ ಲೋಕಾರ್ಪಣೆ ಮಾ.8ರಂದು ನಡೆಯಲಿದೆ ಎಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕೆ.ಎಸ್. ದುರ್ಗಾಶ್ರೀ ಅವರು ತಿಳಿಸಿದ್ದಾರೆ.

ಮಾ.7ರಂದು ಸಂಜೆ 3 ಗಂಟೆಗೆ ಭಕ್ತಾದಿಗಳಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಲಿದೆ. ಮಾ.8ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ನಡೆಯಲಿದೆ. ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ಗಂಟೆಗೆ ಶ್ರೀ ದೇವರಿಗೆ ರಂಗಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅನಂತರ ದೈವಗಳ ನೇಮೋತ್ಸವ ನಡೆಯಲಿದೆ.

ಭಜನೆ:
ಮಾ.8 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರ ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಮಹಾದ್ವಾರ ಲೋಕಾರ್ಪಣೆ:
ಮಾ. 8 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ವಿಷ್ಣುಮೂರ್ತಿ ಮಹಾದ್ವಾರದ ಲೋಕಾರ್ಪಣೆ ನಡೆಯಲಿದೆ. ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ. ಸೌತಡ್ಕ ನೈಮಿಷ ಡ್ರೈ ಫ್ರೂಟ್ಸ್ ಮತ್ತು ಸ್ಪೈಸಸ್ ನ ಬಾಲಕೃಷ್ಣ ನೈಮಿಷ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here