ರಾಜ್ಯ ಬಿಎಂಎಸ್ ಕಾರ್ಯಕಾರಿಣಿ ಸದಸ್ಯರಾಗಿ ನ್ಯಾಯವಾದಿ ಅನಿಲ್ ಕುಮಾರ್ ಆಯ್ಕೆ

0

ಪುತ್ತೂರು: ರಾಜ್ಯ ಬಿಎಂಎಸ್ ಕಾರ್ಯಕಾರಿಣಿ ಸದಸ್ಯರಾಗಿ ಯುವ ನ್ಯಾಯವಾದಿ ಅನಿಲ್ ಕುಮಾರ್ ಯು. ಆಯ್ಕೆಯಾಗಿದ್ದಾರೆ. ಬಳ್ಳಾರಿಯಲ್ಲಿ ನಡೆದ ಕರ್ನಾಟಕ ಭಾರತೀಯ ಮಜ್ದೂರ್ ಸಂಘದ 22ನೇ ತ್ರೈವಾರ್ಷಿಕ ಅಧಿವೇಶನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದ್ದು ರಾಜ್ಯ ಭಾರತೀಯ ಮಜ್ದೂರ್ ಸಂಘದ ಕಾರ್ಯಕಾರಿಣಿ ಸದಸ್ಯರಾಗಿ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಯು. ಅವರನ್ನು ನೇಮಕ ಮಾಡಲಾಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ವಿದ್ಯಾರ್ಥಿ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದ ಉಪ್ಪಿನಂಗಡಿ ಸಮೀಪದ ದಡ್ಡು ನಿವಾಸಿ ಅನಿಲ್ ಕುಮಾರ್ ಅವರು ಖ್ಯಾತ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರೊಂದಿಗೆ ಹೈಕೋರ್ಟ್‌ನಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಅನಿಲ್ ಕುಮಾರ್ ಬೆಳ್ತಂಗಡಿಯಲ್ಲಿ ನ್ಯಾಯವಾದಿಯಾಗಿದ್ದಾರೆ.

LEAVE A REPLY

Please enter your comment!
Please enter your name here