ಮಾ.6(ನಾಳೆ): ಅರಿವು ಕೃಷಿ ಕೇಂದ್ರದಲ್ಲಿ ಉದ್ಯಮಶೀಲತೆ, ಅಭಿವೃದ್ಧಿ ವಿಶೇಷ ಮಾಹಿತಿ ಕಾರ್ಯಾಗಾರ

0

ಪುತ್ತೂರು: ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಸ್ವಂತ ಉದ್ಯಮ ಮಾಡುವವರಿಗೆ ಉದ್ಯಮಶೀಲತೆ, ಅಭಿವೃದ್ಧಿ ವಿಶೇಷ ಮಾಹಿತಿ ಕಾರ್ಯಾಗಾರ ಮಾ.6ರಂದು ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಎಪಿಎಂಸಿ ರಸ್ತೆ ಕ್ರಿಸ್ಟೋಫರ್ ಕಾಂಪ್ಲೆಕ್ಸ್‌ನಲ್ಲಿರುವ ಅರಿವು ಕೃಷಿ ಕೇಂದ್ರದಲ್ಲಿ ನಡೆಯಲಿದೆ.

ಉದ್ಯಮ ಪ್ರಾರಂಭಿಸುವಲ್ಲಿಂದ ಹಿಡಿದು ಯಂತ್ರೋಪಕರಣಗಳು, ಸಾಲ, ಸಬ್ಸಿಡಿ ಮತ್ತು ಮಾರುಕಟ್ಟೆಯವರೆಗಿನ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿ ಯೋಜನೆ ದ.ಕ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಭಾಗವಹಿಸಲಿಚ್ಚಿಸುವವರು ಬೆಳಿಗ್ಗೆ 9.30ರಿಂದ ನೋಂದಾವಣೆ ಮಾಡಿಕೊಳ್ಳಬಹುದು. ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪ್ರತಿಯೊಬ್ಬರ ದಾಖಲಾತಿ ಜೋಡಣೆ ಮತ್ತು ಉದ್ಯಮ ಪ್ರಾರಂಭಿಸಲು ಬೇಕಾದ ಅಂತಿಮ ಯೋಜನೆ ತಯಾರಿ ಬಗ್ಗೆ ಪ್ರಾತ್ಯಕ್ಷಿಕತೆ ನಡೆಯಲಿದೆ. ಇದರಲ್ಲಿ ಭಾಗವಹಿಸಲಿಚ್ಚಿಸುವವರು ಪ್ರತ್ಯೇಕ ನೋಂದಾವಣೆ ಮಾಡಿಕೊಳ್ಳಬಹುದು. ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕಿನ ಜನರು ಕಾರ್ಯಾಗಾರದಲ್ಲಿ ಭಾಗವಹಿಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050293990, 6364570738 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here