ಶ್ರೀಬಲಮುರಿ ವಿದ್ಯಾಗಣಪತಿ ಸನ್ನಿಧಿಯಲ್ಲಿ ‘ನೃತ್ಯೋಹಂ’ ಭರತನಾಟ್ಯ ಪ್ರದರ್ಶನ

0

ಪುತ್ತೂರು: ಬನ್ನೂರು ಕರ್ಮಲ ಭಾರತೀ ನಗರದ ಶ್ರೀಬಲಮುರಿ ವಿದ್ಯಾಗಣಪತಿ ಸನ್ನಿಧಿಯಲ್ಲಿ ಶ್ರೀಅಖಿಲ ಹವ್ಯಕ ಮಹಾಸಭಾ ಪುತ್ತೂರು ಶಾಖೆಯ ಸಹಯೋಗದಲ್ಲಿ ನಡೆದ ಎರಡು ದಿನಗಳ ಮೂಡಪ್ಪ ಸೇವೆಯ ಸಂದರ್ಭ ಮಾ.3ರಂದು ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಇದರ ಕಲಾ ತಂಡದಿಂದ ‘ನೃತ್ಯೋಹಂ’ ಭರತನಾಟ್ಯ ನೃತ್ಯ ಪ್ರದರ್ಶನ ನಡೆಯಿತು. ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ ನಿರ್ದೇಶನದಲ್ಲಿ ಅಕಾಡೆಮಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು.

ಈ ಸಂದರ್ಭ ಹವ್ಯಕ ಮಹಾಸಭಾ ಪುತ್ತೂರು ಶಾಖೆಯ ಅಧ್ಯಕ್ಷ ಶಿವಶಂಕರ ಭಟ್‌ ಬೋನಂತಾಯ, ಮೂಡಪ್ಪ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್‌ ಸುರುಡೇಲು, ವಿವೇಕಾನಂದ ಕಾಲೇಜು ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್‌ ಕಲಾವಿದರನ್ನು ಗೌರವಿಸಿದರು.

LEAVE A REPLY

Please enter your comment!
Please enter your name here