ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಕಾಮಜಲು ಹಿ.ಪ್ರಾ.ಶಾಲೆ ಪ್ರಥಮ

0

ಪುತ್ತೂರು: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಕುಕ್ಕಾಜೆ ಇಲ್ಲಿ ನಡೆದ ಆಯ್ದ ಶಾಲೆಗಳ ಡ್ಯಾನ್ಸ್ ಸ್ಪರ್ಧೆಯಲ್ಲಿ ಮಾಣಿಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಮಜಲು ಇಲ್ಲಿನ 30 ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದು ನಗದು ರೂ 10,000 ಹಾಗೂ ಡಾಕ್ಟರ್ ವಿಶ್ವನಾಥ್ ಕುಕ್ಕಾಜೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ . ಈ ಬಹುಮಾನವನ್ನು .ಇವರಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಮಜಲು ಇಲ್ಲಿನ ಅತಿಥಿ ಶಿಕ್ಷಕಿ ಕುಮಾರಿ ಸುಶ್ಮಿತಾ ಇವರು ನೃತ್ಯ ನಿರ್ದೇಶನವನ್ನು ನೀಡಿರುತ್ತಾರೆ. ಶಿಕ್ಷಕರುಗಳಾದ ಮಾಲತಿ, ಚೈತ್ರ , ಮಾಲತಿಯವರು ಸಹಕರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರುಗಳಾದ ಸುಧಾ ಕುಮಾರಿ ಕೆ, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸುಂದರ ಕುಲಾಲ್ ಪಿ ,ಉಪಾಧ್ಯಕ್ಷರಾದ ಶ್ರೀಯುತ ಮೋಹನ್ ಕುಲಾಲ್ ಕೆ ಎಸ್. ಡಿ.ಎಂ.ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here