ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

0

ಈಶ್ವರಮಂಗಲ:ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮಾ.4ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಸುಳ್ಯ ಪದವು ಸರ್ವೋದಯ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಖೇಶ್.ರೈ ಭಾಗವಹಿಸಿದ್ದರು.

ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕಿ ಕೃಷ್ಣವೇಣಿ ಕೆ ,ಆಡಳಿತ ಮಂಡಳಿಯ ಅಧ್ಯಕ್ಷ ,ಗೋಪಾಲಕೃಷ್ಣ ಕುಂಜತ್ತಾಯ, ಸಂಚಾಲಕ ಸರ್ವೋತ್ತಮ ಬೋರ್ಕರ್ , ಶಾಲೆಯ ಮುಖ್ಯ ಗುರು ವನಿತಾ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 9ನೇ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು. ದೈಹಿಕ ಶಿಕ್ಷಕ ಮರಳಿ ಮೋಹನ ಶೆಟ್ಟಿ ಸ್ವಾಗತಿಸಿ, ಹಿಂದಿ ಶಿಕ್ಷಕಿ ಸುಪ್ರಭಾ ವಂದಿಸಿ ಗಣಿತ ಶಿಕ್ಷಕಿ ವಿನುತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here