ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ- ಧ್ವಜಾರೋಹಣ

0

ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರ ಸಂಭ್ರಮದ ಜಾತ್ರೋತ್ಸವಕ್ಕೆ ಮಾ.6ರಂದು ಕುಂಟಾರು ಬ್ರಹ್ಮಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಮಾ.13ರ ತನಕ ವೈಭವದ ಜಾತ್ರೋತ್ಸವ ಹಾಗು ಮಾ.14ರಂದು ಶ್ರೀ ಕಿನ್ನಿಮಾಣಿ, ಶ್ರೀ ಪೂಮಾಣಿ, ಪಿಲಿಚಾಮುಂಡಿ ದೈವಗಳ ನೇಮೋತ್ಸವ ಅತ್ಯಂತ ವೈಭವದಿಂದ ಜರಗಲಿದೆ.

ಈ ಸಂದರ್ಭದಲ್ಲಿ ಪವಿತ್ರ ಪಾಣಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮಂಜುನಾಥ ರೈ ಸಾಂತ್ಯ, ಉತ್ಸವ ಸಮಿತಿ, ಬೈಲುವಾರು ಸಮಿತಿಯ ಪದಾಧಿಕಾರಿಗಳು, ಸರ್ವಸದಸ್ಯರು ಸೇರಿದಂತೆ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here