ಭಯೋತ್ಪಾದನೆ ವಿರುದ್ಧ ಜಾಗೃತಿ ಮೂಡಿಸದಂತೆ ಅಡ್ಡಿ ಪಡಿಸುವ ಕಾಂಗ್ರೆಸ್ ಸರಕಾರಕ್ಕೆ ಉಳಿಗಾಲವಿಲ್ಲ – ಕಿಶೋರ್ ಬೊಟ್ಯಾಡಿ

0

ಪುತ್ತೂರು: ಭಯೋತ್ಪಾದನೆ ವಿರುದ್ಧ ಜಾಗೃತಿ ಮೂಡಿಸದಂತೆ ಅಡ್ಡಿ ಪಡಿಸುವ ಕಾಂಗ್ರೆಸ್ ಸರಕಾರಕ್ಕೆ ಇನ್ನು ಉಳಿಗಾಲವಿಲ್ಲ. ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರಾಗಿರುವ ಮುರಳಿಕೃಷ್ಣ ಹಸಂತಡ್ಕ ಅವರ ಬಂಧನ ಮಾಡಿ ಹಿಂದೂ ಮನಸ್ಥಿತಿಯನ್ನು ಕುಗ್ಗಿಸಲು ಸಾಧ್ಯವಿಲ್ಲ.

ರಾಜ್ಯದ ಜನತೆಗೆ ನೈತಿಕ ಸ್ಥೈರ್ಯ ತುಂಬಲು ಅಲ್ಪಸಂಖ್ಯಾತರ ಮಿತಿಮೀರಿದ ತುಷ್ಟೀಕರಣಕ್ಕೆ ಕಡಿವಾಣ ಹಾಕಲು ಸಂಘಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕರವರು ತುಮಕೂರಿಗೆ ಪ್ರತಿಭಟನೆಗೆ ತೆರಳುವ ಸಂದರ್ಭದಲ್ಲಿ ಬಂಧಿಸಿರುವುದು ಖಂಡನೀಯ ಹಾಗೂ ಈ ರೀತಿಯ ವರ್ತನೆಯಿಂದ ರಾಜ್ಯದ ಕಾಂಗ್ರೇಸ್ ಸರಕಾರ ಭಯೋತ್ಪಾದನೆಯನ್ನು ಮಾಡುವವರಿಗೆ ಪರೋಕ್ಷವಾಗಿ ಬೆಂಬಲ ನೀಡಿದ ಹಾಗೆ ಆಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here