ರಾಷ್ಟ್ರೀಯ ಹ್ಯಾಂಡ್‌ಬಾಲ್ ಕ್ರೀಡಾಕೂಟ- ಕಾಂಚನ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

0

ನೆಲ್ಯಾಡಿ: ರಾಜಸ್ಥಾನದ ಗಾಂಗ್ರದಲ್ಲಿ ನಡೆದ ರಾಷ್ಟ್ರಮಟ್ಟದ 15ರ ವಯೋಮಿತಿಯ 38ನೇ ಸಬ್ ಜೂನಿಯರ್ ರಾಷ್ಟ್ರೀಯ ಹ್ಯಾಂಡ್ ಬಾಲ್ ಕ್ರೀಡಾಕೂಟಕ್ಕೆ ಕಾಂಚನ ವೆಂಕಟಸುಬ್ರಹ್ಮಣ್ಯಂ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಿಭಾಗದಲ್ಲಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಯದುನಂದನ್, ಕಿಶನ್, ಹಾಗೂ 8ನೇ ತರಗತಿಯ ತರುಣ್ ಮತ್ತು ಬಾಲಕಿಯರ ವಿಭಾಗದಲ್ಲಿ 9ನೇ ತರಗತಿಯ ಹೇಮಶ್ರೀ ಅವರು ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಹೇಮೋದರ ಅವರು ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here