ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾಗಿ ತಾರಾನಾಥ ಕಾಯರ್ಗ

0

ಪುತ್ತೂರು: ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ತಾರಾನಾಥ ಕಾಯರ್ಗರವರು ಆಯ್ಕೆಯಾಗಿದ್ದಾರೆ.
ತಾರಾನಾಥ ಕಾಯರ್ಗರವರು ಪ್ರಸ್ತುತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ, ಕಳೆದ ಅವಧಿಯಲ್ಲಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ತಾರಾನಾಥ ಕಾಯರ್ಗರವರು ಸವಣೂರಿನಲ್ಲಿ ಸಾಧನಾ ಪ್ರಿಂಟರ್ಸ್ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಸವಣೂರು ಬಿಜೆಪಿ ಮಾಜಿ ಕಾರ್ಯದರ್ಶಿ, ಸವಣೂರು ಯುವಕ ಮಂಡಲ ಮತ್ತು ನರಿಮೊಗರು ಜೇಸಿ ಸಂಸ್ಥೆಯ ಅಧ್ಯಕ್ಷರಾಗಿ, ಕಾಣಿಯೂರು ಒಕ್ಕಲಿಗ ಕೃಷಿ ಪತ್ತಿನ ಸಹಕಾರ ಸಂಘದ ಸಲಹಾ ಸಮಿತಿಯ ಸದಸ್ಯರಾಗಿದ್ದಾರೆ. ಸವಣೂರು ಬೊಳ್ಳಿ ಬೊಲ್ಪು ತುಳುಕೂಟ ಸಂಸ್ಥೆಯ ಕೋಧಾಧಿಕಾರಿಯಾಗಿ ಪ್ರಸ್ತುತ ಸೇವೆ ಸಲ್ಲಿಸಿರುವ ತಾರಾನಾಥ ಕಾಯರ್ಗ ಅವರು ಸವಣೂರು ಸುದ್ದಿ ಸೆಂಟರ್‌ನ ಮುಖ್ಯಸ್ಥರಾಗಿದ್ದು, ಸವಣೂರು ಭಾಗದಲ್ಲಿ ಸುದ್ದಿ ಬಿಡುಗಡೆ ದಿನಪತ್ರಿಕೆಯ ಏಜೆಂಟ್‌ರಾಗಿ ಕಳೆದ 25 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here