ಪುತ್ತೂರು ನಗರದಲ್ಲಿ ತೀರ ಹದಗೆಟ್ಟ ರಸ್ತೆಗಳು – ಗುಜರಿಯಂತಾದ ಗಾಂಧಿಕಟ್ಟೆ ಬಳಿ ರಸ್ತೆ- ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

0

ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ.

ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ. ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತ ಮಧುಕುಮಾರ್ ರವರಿಗೆ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇವೆ ಪುತ್ತಿಲ ಪರಿವಾರ ಮನವಿ ಸಲ್ಲಿಸಿದೆ.

ಪುತ್ತಿಲ ಪರಿವಾರದ ಪ್ರಮುಖರಾದ ಪ್ರಸಾದ್ ತಿಂಗಳಾಡಿ, ರಾಜು ಶೆಟ್ಟಿ, ರೂಪೇಶ್ ನಾಯಕ್ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here