ಮಾ.9 :ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ 8ನೇ ವರ್ಷದ ಗುರುಪೂಜೆ, ಸನ್ಮಾನ, ಧಾರ್ಮಿಕ ಕಾರ್ಯಕ್ರಮ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಶಾಂತಿಗೋಡು ಇದರ 8ನೇ ಗುರುಪೂಜೆ, ಸನ್ಮಾನ ಹಾಗೂ ಧಾರ್ಮಿಕ ಕಾರ್ಯಕ್ರಮವು ಮಾ.9ರಂದು ಪರಕ್ಕಮೆ ದೇಯಿ ನಿಲಯದಲ್ಲಿ ನಡೆಯಲಿದೆ. ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ರವಿಕುಮಾರ್ ಕಲ್ಕಾರುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೊಂಬೆಟ್ಟು ಸ್ನೇಹ ಟೆಕ್ಸ್‌ಟೈಲ್ಸ್‌ನ ಮಾಲಕರಾದ ಸತೀಶ್ ಕುಮಾರ್‌ರವರು ಸನ್ಮಾನಿತರನ್ನು ಸನ್ಮಾನಿಸಲಿದ್ದಾರೆ. ಚಲನಚಿತ್ರ ನಿರ್ದೇಶಕ ಹಾಗೂ ಆಪ್ತ ಸಮಾಲೋಚಕರು ಸ್ಮಿತೇಶ್ ಬಾರ್ಯರವರು ಗುರು ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಂತಿಗೋಡು ಪ್ರಗತಿಪರ ಕೃಷಿಕ ಸಚಿನ್ ನಾೖಕ್ ಸರೋಳಿ, ಪರಕ್ಕಮೆ ದೇಯಿ ನಿಲಯದ ಹಿರಿಯರು ಪಿ.ಎಸ್ ಶೇಖರ ಪೂಜಾರಿ, ನರಿಮೊಗರು ವಲಯ ಸಂಚಾಲಕ ಹರೀಶ್ ಕೈಪಂಗಳ, ತಾಲೂಕು ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ವಿಮಲ ಸುರೇಶ್‌ರವರು ಭಾಗವಹಿಸಲಿದ್ದಾರೆ ಎಂದು ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ರವಿಕುಮಾರ್ ಕಲ್ಕಾರು. ಶಾಂತಿಗೋಡು ಯುವವಾಹಿನಿ ಗ್ರಾಮ ಸಮಿತಿ ಅಧ್ಯಕ್ಷ ಅಖಿನ್ ಓಲಾಡಿ, ಶಾಂತಿಗೋಡು ಬಿಲ್ಲವ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕು.ಶ್ರಾವ್ಯ ಪಾಣಂಬು, ಶಾಂತಿಗೋಡು ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ರೂಪಾ ಸತೀಶ್ ಪರಕ್ಕಮೆರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here