ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ- ಅನುಶ್ರೀ ಪುಣಚ ಆಯ್ಕೆ

0

ಪುಣಚ: ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ HCL ಸಂಸ್ಥೆಯವರು ಏರ್ಪಡಿಸಿದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿಟ್ಲ ಸರಕಾರಿ ಪ್ರೌಢಶಾಲಾ (RMSA) ತಂಡದ ಕು. ಅನುಶ್ರೀ ಪೊಯ್ಯಮೂಲೆ ದ್ವಿತೀಯ ಸ್ಥಾನವನ್ನು ಪಡೆದು ತಮಿಳುನಾಡಿನ ಚೆನ್ನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪುಣಚ ಗ್ರಾಮದ ಪೊಯ್ಯಮೂಲೆ ಲಿಂಗಪ್ಪನಾಯ್ಕ ಮತ್ತು ಉದಯ ಕುಮಾರಿ ದಂಪತಿಗಳ ಪುತ್ರಿಯಾಗಿದ್ದಾರೆ. ವಿಟ್ಲ ಸರಕಾರಿ ಪ್ರೌಢಶಾಲೆ (RMSA) ದೈಹಿಕ ಶಿಕ್ಷಕರಾದ ವಿದ್ಯಾಶಂಕರ್ ಡಿ. ಮತ್ತು ಶ್ವೇತಾ ಕುಮಾರಿ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here