ಸರ್ವೆ ಕಲ್ಪಣೆ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನೆ – ಅಧ್ಯಕ್ಷರಾಗಿ ರಾಧಾಕೃಷ್ಣ ರೈ, ಪ್ರ.ಕಾರ್ಯದರ್ಶಿ: ಬಾತಿಷಾ ಪರಾಡ್

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ರೈ ರೆಂಜಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಾತಿಷಾ ಪರಾಡ್ ಆಯ್ಕೆಯಾಗಿದ್ದಾರೆ.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಚಂದ್ರಶೇಖರ ನೆಕ್ಕಿಲು ಹಾಗೂ ತಾಜು ರಫೀಕ್, ಕೋಶಾಧಿಕಾರಿಯಾಗಿ ಸುಂದರ ಬಲ್ಯಾಯ ನೆಕ್ಕಿಲು ಅವರನ್ನು ಆಯ್ಕೆ ಮಾಡಲಾಯಿತು. ಮಿತಿ ಸದಸ್ಯರುಗಳಾಗಿ ಶಿವನಾಥ ರೈ ಮೇಗಿನಗುತ್ತು, ಮಹಾಬಲ ರೈ, ಕರುಣಾಕರ ಗೌಡ ಎಲಿಯ, ಮಹಮ್ಮದ್ ಆಲಿ, ಬಾಲಪ್ಪ ನಾಯ್ಕ, ಯೋಗೀಶ್, ಅಬ್ದುಲ್ ನಾಸಿರ್, ಗುರುಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ನಿವೃತ್ತ ಮುಖ್ಯ ಗುರು ಮಹಾಬಲ ರೈ, ಮುಂಡೂರು ಸಿ.ಎ ಬ್ಯಾಂಕ್ ನಿರ್ದೇಶಕ ಶಿವನಾಥ ರೈ ಮೇಗಿನಗುತ್ತು, ಮುಂಡೂರು ಗ್ರಾ.ಪಂ ಸದಸ್ಯರಾದ ಕರುಣಾಕರ ಗೌಡ ಎಲಿಯ ಹಾಗೂ ಮಹಮ್ಮದ್ ಆಲಿ ಉಪಸ್ಥಿತರಿದ್ದರು. ಶಿಕ್ಷಕಿ ಉಮಾವತಿ ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕಿ ಕಮಲಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here