ಬಲ್ಯ: ಬೈಕ್-ಆಟೋ ರಿಕ್ಷಾ ಡಿಕ್ಕಿ, ಬೈಕ್ ಸವಾರನಿಗೆ ಗಾಯ

0

ನೆಲ್ಯಾಡಿ: ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಬಲ್ಯ-ನೆಲ್ಯಾಡಿ ರಸ್ತೆಯಲ್ಲಿ ಮಾ.7ರಂದು ರಾತ್ರಿ ನಡೆದಿದೆ.
ಬಲ್ಯ ನಿವಾಸಿ, ಬೈಕ್ ಸವಾರ ಚಂದ್ರಶೇಖರ ಗಾಯಗೊಂಡವರಾಗಿದ್ದಾರೆ. ಚಂದ್ರಶೇಖರ ಅವರು ಬೈಕ್‌ನಲ್ಲಿ (ಕೆಎ 21, ಆರ್ 0628)ಬಲ್ಯದಿಂದ ನೆಲ್ಯಾಡಿ ಕಡೆಗೆ ಸಂಚರಿಸುತ್ತಿದ್ದು ಬಲ್ಯ ಗ್ರಾಮದ ಗೋವಿಂದಕಟ್ಟೆ ಎಂಬಲ್ಲಿಗೆ ತಲುಪಿದಾಗ ನೆಲ್ಯಾಡಿಯಿಂದ ಬಲ್ಯ ಕಡೆಗೆ ರಮೇಶ್ ರೈ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಆಟೋ ರಿಕ್ಷಾ (ಕೆಎ21, ಸಿ 4685)ಡಿಕ್ಕಿಯಾಗಿದೆ. ಘಟನೆಯಿಂದ ಗಾಯಗೊಂಡಿದ್ದ ಚಂದ್ರಶೇಖರ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಬಲ್ಯ ನಿವಾಸಿ ಉದಯ ಪ್ರಸಾದ್ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here