ಮಾ.17: ಉಚಿತ ದಂತ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು, ಶ್ರೀ ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್ ಪುತ್ತೂರು ಮತ್ತು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯ ಇದರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಶ್ರೀ ಸತ್ಯಸಾಯಿ ಮಂದಿರ ವಠಾರದಲ್ಲಿ ಮಾ.17ರಂದು ಬೆಳಿಗ್ಗೆ ಗಂ.9.30 ರಿಂದ ಅಪರಾಹ್ನ 1.30ರವರೆಗೆ ನಡೆಯಲಿದೆ.

ಬೆಳಿಗ್ಗೆ ಗಂಟೆ 8.30ರಿಂದ 11.30ರ ತನಕ ದಾಖಲಾತಿ ನಡೆಯಲಿದೆ. ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳು ಲಭ್ಯವಿರುತ್ತದೆ. ಕಾರ್ಯಕ್ರಮದಲ್ಲಿ ಸುಳ್ಯ ಕೆ.ವಿ.ಜಿ ದಂತ ಮಹಾವಿದ್ಯಾಲಯದ ಅನುಭವೀ ದಂತ ವೈದ್ಯರ ತಂಡ ಸೇವೆ ಸಲ್ಲಿಸಲಿದ್ದಾರೆ. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here