ಸುಳ್ಯಪದವು ಶಬರಿನಗರ ಶ್ರೀ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

0

ಬಡಗನ್ನೂರು:  ಸುಳ್ಯಪದವು ಶಬರಿನಗರ ಶ್ರೀ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ  ದೈವಗಳ ನೇಮೋತ್ಸವ. ಅಂಗವಾಗಿ ಮಾ.10 ರಂದು ಸ್ವಾಮಿ ಕೊರಗಜ್ಜ ಬಾಲ ಭಜನಾ ಸಂಘ ಶಬರಿನಗರ ಸುಳ್ಯಪದವು,  ಶ್ರೀ ಮಹಾಲಕ್ಷ್ಮೀ ಮಹಿಳಾ ಭಜನಾ ಮಂಡಳಿ ಸುಳ್ಯಪದವು, ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಸುಳ್ಯಪದವು,ಶ್ರೀ ಮಹಾವಿಷ್ಣು ಭಜನಾ ಸಂಘ ಸುಳ್ಯಪದವು ,ಶ್ರೀ ಅಯ್ಯಪ್ಪ ಭಜನಾ ಮಂದಿರ ಸುಳ್ಯಪದವು ತಂಡದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.ಸರ್ವೋದಯ ವಿದ್ಯಾಸಂಸ್ಥೆ ಸುಳ್ಯಪದವು ಇದರ ವಿದ್ಯಾರ್ಥಿನಿಯರಿಂದ , ಶ್ರೀ ಮಹಾವಿಷ್ಣು ಮಕ್ಕಳ ಕುಣಿತ ಭಜನಾ ಮಂಡಳಿ ಕನ್ನಡ ಹಾಗೂ ಶ್ರೀ ಅಂಬಭವಾನಿ ಭಜನಾ ಮಂಡಳಿ ಪಾದೆಗದ್ದೆ ಇವರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೊರಗಜ್ಜ ಸೆವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮರದಮೂಲೆ, ಉಪಾಧ್ಯಕ್ಷ ಸದಾನಂದ ರೈ ಬೋಳಂಕೂಡ್ಲು, ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ, ಜತೆ ಕಾರ್ಯದರ್ಶಿ ವಿನಾಯ ಕುಮಾರ್ ದೇವಸ್ಯ , ಪುಜಾಕರ್ಮಿ ಮಾಧವ ಸಾಲಿಯಾನ್ ಹಾಗೂ ಸಮಿತಿ  ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು  ಪದಾಧಿಕಾರಿಗಳು ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here