ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬಾ ಭಜನಾ ಮಂದಿರಕ್ಕೆ ಶಾಸಕ ಅಶೋಕ್ ಕುಮಾರ್ ರೈರವರು ಭೇಟಿ

0

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬಾ ಭಜನಾ ಮಂದಿರಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈರವರು ಭೇಟಿ ನೀಡಿದರು. ಮಾ.23, ಹಾಗೂ ಮಾ.24 ರಂದು ನೂತನ ಭಜನಾ ಮಂದಿರದ ಲೋಕಾರ್ಪಣೆ ಸಮಾರಂಭ ನಡೆಯಲಿದ್ದು, ಈ ನಿಟ್ಟಿನಲ್ಲಿ ನಡೆಯುತ್ತಿದ್ದ ಕಾಮಗಾರಿಗಳನ್ನು ವೀಕ್ಷಿಸಿ ತನ್ನಿಂದಾಗುವ ಸಹಕಾರ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮಂದಿರದ ಗೌರವಾಧ್ಯಕ್ಷರಾದ ಸೋಮಶೇಖರ ಶೆಟ್ಟಿ ಅಳಕೆಮಜಲು, ಗೌರವ ಸಲಹೆಗಾರರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಧ್ಯಕ್ಷರಾದ ಜಗದೀಶ್ ಪೂಜಾರಿ ಅಳಕೆಮಜಲು, ಕೋಶಾಧಿಕಾರಿ ಸುಧೀರ್ ಕುಮಾರ್ ನಾಯ್ಕ್ ಕೆಮನಾಜೆ, ಪ್ರಧಾನ ಕಾರ್ಯದರ್ಶಿ ತಿರುಮಲೇಶ್ವರ ನಾಯ್ಕ್ ಕೆಮನಾಜೆ, ಶಾರದಾಂಬಾ ವಿಶ್ವಸ್ಥ ಮಂಡಳಿಯ ಸದಸ್ಯರಾದ ಸಂಜೀವ ಪೆಲತ್ತಿಂಜ, ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪದ್ಮನಾಭ, ಶ್ರೀ ಶಾರದಾಂಬ ಭಜನಾಮಂಡಳಿಯ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರಾದ ಚಿದಾನಂದ ಪೆಲತ್ತಿಂಜ, ಕೃಷ್ಣ ಕಿಶೋರ್ ಪೆಲತ್ತಿಂಜ, ಉದಯ ಕುಲಾಲ್ ಪುಂಡಿಕಾಯಿ, ಕಾರ್ಯದರ್ಶಿ ಭಾಸ್ಕರ ರೈ ಅಳಕೆಮಜಲು ಸೇರಿದಂತೆ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here