ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ

0

ಮುಂದಿನ 4 ವರ್ಷದಲ್ಲಿ ಗ್ರಾಮಗಳ ಸಂಪೂರ್ಣ ಅಭಿವೃದ್ದಿ: ಅಶೋಕ್ ರೈ
ಪುತ್ತೂರು: ಮುಂದಿನ 4 ವರ್ಷಗಳ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು ಸಂಪೂರ್ಣವಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಮಾಡಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ರೂ. ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿಮಾತನಾಡಿದರು.
ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ವಿವಿಧ ಗ್ಯಾರಂಟಿಗಳ ಕಾರಣದಿಂದ ಖಾತೆಗೆ ತಿಂಗಳಿಗೆ ಕುಟುಂಬಕ್ಕೆ ತಲಾ 5000 ಹಣ ಜಮೆಯಾಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ಅನೇಕ ಕುಟುಂಬಗಳು ಸ್ವಾವವಲಂಬಿ ಜೀವನ ನಡೆಸುತ್ತಿದ್ದಾರೆ. ಕಡು ಬಡತನದಲ್ಲಿರುವ ಕುಟುಂಬಗಳು ಉಸಿರು ಬಿಡುವಂತಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜನರ ಖಾತೆಗೆ ಹಣ ಜಮೆಯಾಗುತ್ತಿದೆ ಎಂದು ಹೇಳಿದರು. ಜನತೆಗೆ ಕಾಂಗ್ರೆಸ್ ಸರಕಾರ ಆಡಳಿತದಲ್ಲಿರಬೇಕು ಎಂಬ ಭಾವನೆ ಉಂಟಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,ಮಾಜಿ ಜಿ.ಪಂ.ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ, ಉಪಾಧ್ಯಕ್ಷರಾದ ಪ್ರಮೋದ್ ಕೆಎಸ್, ಕೆಪಿಸಿಸಿ ಸಂಯೋಜಕರಾದ ಪ್ರದೀಪ್‌ಕುಮಾರ್ ರೈ ಪಾಂಬಾರು, ಕಾಂಗ್ರೆಸ್ ವಕ್ತಾರ ಅಮಲರಾಮಚಂದ್ರ, ಮಾಜಿ ಗ್ರಾಪಂ ಅಧ್ಯಕ್ಷರಾದ ಶ್ಯಾಂ ಸುಂದರ್ ರೈ, ವಸಂತ ರೈ ದುಗ್ಗಳ, ಬ್ಲಾಕ್ ಸೋಶಿಯಲ್ ಮೀಡಿಯಾ ಅಧ್ಯಕ್ಷರಾದ ಸಿದ್ದಿಕ್ ಸುಲ್ತಾನ್, ಕೊಳ್ತಿಗೆ ಗ್ರಾಪಂ ಸದಸ್ಯರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ವಲಯಾಧ್ಯಕ್ಷರಾದ ವೆಂಕಟ್ರಮಣ ಕೆಎಸ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here