ಭಕ್ತಕೋಡಿ: ಸರ್ವೆ ಷಣ್ಮುಖ ಯುವಕ ಮಂಡಲದ ವತಿಯಿಂದ ಸ್ವಚ್ಚತೆ

0

ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಇದರ ವತಿಯಿಂದ ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಭಕ್ತಕೋಡಿಯಲ್ಲಿ ಇರುವ ಸಾರ್ವಜನಿಕ ನೀರಿನ ಟ್ಯಾಂಕ್‌ನ ಸುತ್ತಮುತ್ತ ಇದ್ದ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಚಾತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಯುವಕ ಮಂಡಲದ ವತಿಯಿಂದ ಕಳೆದ ಹಲವು ವರ್ಷಗಳಿಂದ ಈ ಟ್ಯಾಂಕ್‌ನ್ನು ಸಾರ್ವಜನಿಕರ ಹಾಗೂ ಭಕ್ತಕೋಡಿ ಶಾಲಾ ಮಕ್ಕಳ ಬಳಕೆಗೆ ಯೋಗ್ಯವಾಗಿರುವ ರೀತಿ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದು ಪ್ರತೀ ವರ್ಷವೂ ಇಲ್ಲಿ ಸ್ವಚ್ಚತಾ ಕೆಲಸವನ್ನು ಮಾಡುತ್ತಿದೆ.

ಈ ಬಾರಿ ನಡೆದ ಸ್ವಚ್ಚಾತಾ ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಗೌತಮ್‌ರಾಜ್ ಕರುಂಬಾರು, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಬ್ರಹ್ಮಣ್ಯ ಕರುಂಬಾರು, ಕಮಲೇಶ್ ಸರ್ವೆದೋಳಗುತ್ತು, ಸಂಘಟನಾ ಕಾರ್ಯದರ್ಶಿ ಹರೀಶ್ ಅಲೇಕಿ, ಕಾರ್ಯಕಾರಿ ಸಮಿತಿ ಸಂಚಾಲಕ ರಾಮಣ್ಣ ಪೂಜಾರಿ ಭಕ್ತಕೋಡಿ, ಯುವಕ ಮಂಡಲದ ಸದಸ್ಯ ಕೃಷ್ಣಪ್ಪ ಪಾಲೆತ್ತಗುರಿ, ಗ್ರಾಮಸ್ಥರಾದ ಉಮೇಶ್ ಎಸ್.ಡಿ ಸರ್ವೆದೋಳಗುತ್ತು ಹಾಗೂ ಶಾಂತಪ್ಪ ಪೂಜಾರಿ ಭಕ್ತಕೋಡಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here