ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್ ಶಿಪ್-ಪ್ರಶಸ್ತಿ ಗೆದ್ದ ಬಾಲಕೃಷ್ಣ ಗೌಡ

0

ಪುತ್ತೂರು : ಉಡುಪಿ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಇದರ ವತಿಯಿಂದ ಮಾರ್ಚ್ 9 ರಿಂದ 10 ರವರೆಗೆ ನಡೆದ ಎರಡನೇ ದಕ್ಷಿಣ ಭಾರತ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕಡಬ ತಾಲೂಕು ರೇಂಜಿಲಾಡಿ ಗ್ರಾಮದ ಬಾಲಕೃಷ್ಣ ಗೌಡ ಉಳಿಪು (ದಿ.ರಾಮಣ್ಣಗೌಡ ಮತ್ತು ಉಮಕ್ಕ ದಂಪತಿ ಪುತ್ರ) ಇವರು 5000 ಮೀಟರ್ ವೇಗದ ನಡಿಗೆಯಲ್ಲಿ ತೃತೀಯ, 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದಿರುತ್ತಾರೆ.

800 ಮೀಟರ್ ಓಟದಲ್ಲಿ ನಾಲ್ಕನೇ ಸ್ಥಾನ, 4×100 ಮೀಟರ್ ರಿಲೇಯಲ್ಲಿ ನಾಲ್ಕನೇ ಸ್ಥಾನ ಪಡೆದಿರುತ್ತಾರೆ, ಕ್ರೀಡಾಕೂಟದಲ್ಲಿ ಕರ್ನಾಟಕ ಮಾತ್ರವಲ್ಲದೇ, ತಮಿಳುನಾಡು, ಕೇರಳ, ತೆಲಂಗಾಣ, ಪಾಂಡಿಚೇರಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ರಾಜ್ಯಗಳ ಸುಮಾರು 770ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here