ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌.ಡಿ.ಎಂ.ಸಿ ತರಬೇತಿ ಹಾಗೂ ಪೋಷಕರ ಸಭೆ

0

ಉಪ್ಪಿನಂಗಡಿ: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗೆ ತರಬೇತಿ ಹಾಗೂ ಪೋಷಕರ ಸಭೆಯನ್ನು ಆಯೋಜಿಸಲಾಯಿತು.
ತರಬೇತುದಾರರಾಗಿ ಆಗಮಿಸಿದ ಪತ್ರಕರ್ತ ಶಂಸುದ್ದೀನ್ ಸಂಪ್ಯ ಮಾತನಾಡಿ ಪ್ರಸಕ್ತವಾಗಿ ಮಕ್ಕಳು ಮತ್ತು ಪೋಷಕರ ನಡುವಿನ ಕಲಿಕಾ ಬಾಂಧವ್ಯವನ್ನು ಮನಮುಟ್ಟುವಂತೆ ಮಂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಮ್ಮಾರ ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ಅಝೀಝ್ ಬಿ.ಕೆ ವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಎಂ ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಬದಲ್ಲಿ ಹಿರೆಬಂಡಾಡಿ ಗ್ರಾಮ ಪಂಚಾಯತ್ ಸದಸ್ಯೆ ವಾರಿಜಾಕ್ಷಿ, ಎಸ್‌‌.ಡಿ.ಎಂ.ಸಿ ಉಪಾಧ್ಯಕ್ಷೆ ತೇಜಾವತಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕ ರಕ್ಷಕರು ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿ.ಟಿ.ಪಿ ಶಿಕ್ಷಕಿ ಸಂಧ್ಯಾ ನಿರೂಪಿಸಿದರು. ಶಿಕ್ಷಕಿ ಸುಮನಾ ವಂದಿಸಿದರು.

LEAVE A REPLY

Please enter your comment!
Please enter your name here