ಬಜತ್ತೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿ ಪೂಜೆ

0

ನೆಲ್ಯಾಡಿ: ಬಜತ್ತೂರು ಗ್ರಾಮದಲ್ಲಿ 70.25 ಲಕ್ಷ ರೂ.ಅನುದಾನದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ಮಾ.6ರಂದು ಗುದ್ದಲಿಪೂಜೆ ನೆರವೇರಿಸಿದರು.
ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈಯವರು, ಅಭಿವೃದ್ಧಿ ಎನ್ನುವುದು ನಿರಂತರ ಪ್ರಕ್ರಿಯೆ. ಕ್ಷೇತ್ರದ ಪ್ರತಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವುದು ನಮ್ಮ ಗುರಿ ಎಂದರು. ಬಜತ್ತೂರು ಗ್ರಾಮದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಕೊಟ್ಟ ಶಾಸಕ ಅಶೋಕ್ ಕುಮಾರ್ ರೈಯವರನ್ನು ಕಾಂಗ್ರೆಸ್ ಬಜತ್ತೂರು ವಲಯಾಧ್ಯಕ್ಷೆ ಅನಿತಾಕೇಶವ ಗೌಡ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್ ಕೆ.ಬಿ., ಹಿರಿಯ ಕಾಂಗ್ರೆಸ್ ಮುಖಂಡರಾದ ಶೇಖರ ಪೂಜಾರಿ, ನಝೀರ್ ಮಠ, ಬಜತ್ತೂರು ಗ್ರಾ.ಪಂ.ಸದಸ್ಯೆ ಪ್ರೆಸಿಲ್ಲಾ ಡಿ.ಸೋಜ, ಮಾಜಿ ಸದಸ್ಯ ಅಹಮ್ಮದ್ ಬಾವಾ ಎನ್., ಬೆದ್ರೋಡಿ ಬೂತ್ ಅಧ್ಯಕ್ಷ ಅಜೀಜ್, ಕೆಮ್ಮಾರ ಬೂತ್ ಅಧ್ಯಕ್ಷ ಉಮ್ಮರ್, ಕಾಂಚನ ಬೂತ್ ಅಧ್ಯಕ್ಷ ಶ್ರೀಧರ ಪೂಜಾರಿ, ನೀರಕಟ್ಟೆ ಮಸೀದಿ ಅಧ್ಯಕ್ಷರಾದ ಹಸನಬ್ಬ, ಕಾರ್ಯದರ್ಶಿ ಇಸ್ಮಾಯಿಲ್, ವಳಾಲು ಮಸೀದಿ ಉಪಾಧ್ಯಕ್ಷರಾದ ಹಾಜಿ ಬಿ.ಎಂ.ಅಬೂಬಕ್ಕರ್ ಮುಸ್ಲಿಯಾರ್, ಸುನೀತ್‌ಕುಮಾರ್, ಸಿದ್ದಪ್ಪ ನಾಕ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಈ ವೇಳೆ ಗ್ರಾಮಸ್ಥರು ಶಾಸಕರಿಗೆ ವಿವಿಧ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here