ಎವಿಜಿ ಶಾಲೆಯಲ್ಲಿ ಪೋಷಕರ ಸಭೆ

0

ಪೋಷಕರು ಶಿಕ್ಷಣ ಸಂಸ್ಥೆಗೆ ಆಧಾರ ಸ್ತಂಭ – ಗುಡ್ಡಪ್ಪ ಗೌಡ ಬಲ್ಯ

ಪುತ್ತೂರು : ಯಾವುದೇ ಶಿಕ್ಷಣ ಸಂಸ್ಥೆಗೆ ಅಲ್ಲಿನ ವಿದ್ಯಾರ್ಥಿಗಳ ಪೋಷಕರು ಆಧಾರ ಸ್ತಂಭ ಎಂದು ಶಾಲೆಯ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ ಶಾಲೆಯ ಪೋಷಕರನ್ನು ಕುರಿತು ಪ್ರಶಂಸಿಸಿದರು.ಕೃಷ್ಣನಗರ ಬನ್ನೂರಿನ ಅಲುಂಬುಡದ ಎವಿಜಿ ಶಾಲೆಯಲ್ಲಿ ಮಾ.7ರಂದು ನಡೆದ ಪೋಷಕರ ಸಭೆಯಲ್ಲಿ ಮಾತನಾಡಿದರು. ಶಾಲೆ ಎಂದೊಡನೆ ಆಡಳಿತ ಮಂಡಳಿ, ಶಿಕ್ಷಕ ವೃಂದ ವಿದ್ಯಾರ್ಥಿಗಳು ಎಷ್ಟು ಅಗತ್ಯವೋ ಸಕರಾತ್ಮಕವಾಗಿ ಸ್ಪಂದಿಸುವ ಪೋಷಕರು ಅಷ್ಟೇ ಅಗತ್ಯ. ಅವರ ಪಾಲ್ಗೊಳ್ಳುವಿಕೆ ಹಾಗೂ ಸಹಕಾರಿಂದ ಶಿಕ್ಷಣ ಸಂಸ್ಥೆ ಬೆಳೆಯುತ್ತದೆ ಎಂದರು.


ಸಭಾಧ್ಯಕ್ಷತೆ ವಹಿಸಿದ ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ ಅವರು ಮಾತನಾಡಿ ಮುಂದಿನ ಶೈಕ್ಷಣಿಕ ವರ್ಷದ ದಾಖಲಾತಿ ಹಾಗೂ ಇತರ ಭೌತಿಕ ಅಗತ್ಯಗಳ ಪೂರೈಕೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಉಮೇಶ್ ಗೌಡ ಮಲುವೇಳು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಯಶುಭ ರೈ ಪ್ರಸಕ್ತ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ಮಕ್ಕಳ ಪೋಷಕರು, ಶಿಕ್ಷಕರು ಬೋಧಕೇತರ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯರಾದ ಚೇತನ ಕೀರ್ತಿ, ನಿಷ್ಕ ಎನ್ ರೈ, ಆನ್ವೀ ಪ್ರಾರ್ಥಿಸಿದರು. ಶಿಕ್ಷಕಿ ವನಿತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಗೌಡ ಮಲುವೇಳು ವಂದಿಸಿದರು.

LEAVE A REPLY

Please enter your comment!
Please enter your name here