ಮಾ.15ರಂದು ಮಹಾಕಾಳಿ ಮೆಚ್ಚಿ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಮಾ.15ರಂದು ರಾತ್ರಿ ವೇ.ಮೂ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪವಿತ್ರಪಾಣಿ ಶ್ರೀ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ಮಹಾಕಾಳಿ ಮೆಚ್ಚಿಯು ಜರಗಲಿದೆ.
ರಾತ್ರಿ 9 ರಿಂದ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 8:30ರಿಂದ 10:30ರವರೆಗೆ ಕೃತಿ ಕೈಲಾರ್ ಮತ್ತು ಬಳಗದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ. ಮಾ.19ರಂದು ರಾತ್ರಿ 8ಕ್ಕೆ ಕದಿಕ್ಕಾರು ಬೀಡಿನಿಂದ ಭಂಡಾರ ಬಂದು ದೇವಾಲಯದ ಸಂತೆಮಜಲಿನಲ್ಲಿ ದೊಂಪದ ಬಲಿ ನೇಮೋತ್ಸವ ನಡೆಯಲಿದೆ ಎಂದು ಶ್ರೀ ದೇವಾಲಯದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here