ನಿಯಂತ್ರಣ ತಪ್ಪಿ ಕಾರು ಪಲ್ಟಿ-ಗಾಯ

0

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಪ್ರಯಾಣಿಕರೋರ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ.
ಮಾರನಹಳ್ಳಿ ನಿವಾಸಿ ಮುಹಮ್ಮದ್ ಶಾಫಿ ತಂಙಳ್ (50) ಗಾಯಗೊಂಡ ವ್ಯಕ್ತಿ. ಬಿ.ಸಿ.ರೋಡ್ ಕಡೆಯಿಂದ ಮಾರ್ನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಗೋಳಿತ್ತೊಟ್ಟು ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಹಾಗೂ ಇನ್ನೊಬ್ಬ ಪ್ರಯಾಣಿಕ ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here