ಪುತ್ತಿಲ ಪರಿವಾರದೊಂದಿಗೆ ಮಾತುಕತೆಗೆ ಎಲ್ಲಾ ದ್ವಾರಗಳು ತೆರೆದಿವೆ- ಜಿಲ್ಲಾಧ್ಯಕ್ಷರ ತೀರ್ಮಾನ ಅಂತಿಮ-ಕ್ಯಾ ಬ್ರಿಜೇಶ್‌ ಚೌಟ

0

ಪುತ್ತೂರು: ಪುತ್ತಿಲ ಪರಿವಾರದೊಂದಿಗೆ ಮಾತುಕತೆಯ ಎಲ್ಲಾ ದ್ವಾರಗಳೂ ತೆರೆದಿವೆ. ಬಿಜೆಪಿ ಜಿಲ್ಲಾಧ್ಯಕ್ಷರು ಈ ಬಗ್ಗೆ ಈಗಾಗಲೇ 2 ಬಾರಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಹೇಳಿದ್ದಾರೆ. ಜಿಲ್ಲಾಧ್ಯಕ್ಷರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ದ.ಕ  ಲೋಕಸಭಾ ಕ್ಷೇತ್ರದ ಬಿಜೆಪಿ  ಅಭ್ಯರ್ಥಿ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ. 

ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ನಮಗೆ ಜಿಲ್ಲಾಧ್ಯಕ್ಷರೇ ಸುಪ್ರೀಂ ಅವರ ತೀರ್ಮಾನ ಅಂತಿಮ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ಎಂದು ಪುನರುಚ್ಚರಿಸಿದರು.ಇದಕ್ಕೂ ಮುನ್ನ ಅಮರ್‌ ಜವಾನ್‌ ಸ್ಮಾರಕಕ್ಕೆ ಭೇಟಿ ಗೌರವ ಸಲ್ಲಿಸಿದರು.ಲೋಕಸಭಾ ಅಭ್ಯರ್ಥಿಯಾಗಲು ಸಹಕರಿಸಿದ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲೆಯ ಶಾಸಕರುಗಳಿಗೆ ಕೃತಜ್ಞತೆ ಸಲ್ಲಿಸಿದ ಚೌಟ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿ ಹಿಂದುತ್ವದ ಬದ್ದತೆಯೊಂದಿಗೆ, ಅಭಿವೃದ್ದಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ,ಪಕ್ಷದ ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here