ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಿಯ ಪ್ರತಿಷ್ಠಾ ಉತ್ಸವ- ಜಾತ್ರೋತ್ಸವ ಸಂಪನ್ನ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿಯ ಅರಾಧ್ಯ ಮೂರ್ತಿ ಶ್ರೀ ಶಾಂತದುರ್ಗಾ ದೇವಿಯ ಪ್ರತಿಷ್ಠಾ ಉತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮ ಮಾ.13ರಂದು ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಸಂಪನ್ನ ಗೊಂಡಿತು.ಮಾ.12ರಂದು ಮಂಗಳವಾರ ಬಲಿವಾಡು ಶೇಖರಣೆ ಹಾಗೂ ಹಸಿರುವಾಣಿ ಶೇಖರಣೆ ನಡೆಯಿತು.

ಮಾ.13ರಂದು ಬೆಳಿಗ್ಗೆ ಪ್ರಾರ್ಥನೆ, ಗಣಪತಿ ಹೋಮ ಶ್ರೀ ದೇವರಿಗೆ ಪಂಚವಿಂಶತಿ ಕಲಶ ನಡೆಯಿತು. ಮಧ್ಯಾಹ್ನ  ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಪೂಜೆ ಪ್ರಸಾದ ವಿತರಣೆ ನಂತರ ಭೂತ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಶ್ರೀ ದೇವರ ಗರ್ಭ ಗೃಹ ಪ್ರವೇಶ ಮಂತ್ರಾಕ್ಷತೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷ ಪ್ರಮೋದ್ ಆರಿಗ ನಿಡ್ಪಳ್ಳಿ ಗುತ್ತು, ಶ್ರೀ ಕಿನ್ನಿಮಾಣಿ ಪೂಮಾಣಿ ಪರಿವಾರ ದೈವಸ್ಥಾನ ಇದರ ಅನುವಂಶಿಕ ಆಡಳಿತ ಮೊಕ್ತೇಸರ ಪ್ರವೀಣ್ ಎನ್ ಆರಿಗ ನಿಡ್ಪಳ್ಳಿ ಗುತ್ತು.ದೇವಸ್ಥಾನದ ಪ್ರಧಾನ ಅರ್ಚಕ ನವೀನ್ ಹೆಬ್ಬಾರ್, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ ಹಾಗೂ ಎಲ್ಲಾ ಸದಸ್ಯರು, ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು. 

LEAVE A REPLY

Please enter your comment!
Please enter your name here