ಪುತ್ತಿಲರನ್ನು ಸೇರ್ಪಡೆ ಮಾಡಿದ್ದು ನಾವಲ್ಲ ಮಾಧ್ಯಮದವರು ಕೊಟ್ಟ ಪ್ರಚಾರ – ಬಿಜೆಪಿ ಜಿಲ್ಲಾಧ್ಯಕ್ಷರ ಅಚ್ಚರಿ ಹೇಳಿಕೆ

0

ಪುತ್ತೂರು:ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿದ್ದು ನಾವಲ್ಲ.ಅದು ಮಾಧ್ಯಮದವರು ಕೊಟ್ಟ ಪ್ರಚಾರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಾಗಿಲು ಮುಚ್ಚಿ ನಡೆದ ಪಕ್ಷದ ಪ್ರಮುಖರ ಸಭೆಯ ಬಳಿಕ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಕುಂಪಲ,ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೇಗೆ ಕೆಲಸ ಮಾಡಬೇಕೆಂಬ ಕುರಿತು ಚರ್ಚಿಸಲು ಸಭೆ ಮಾಡಿದ್ದೇವೆ.ಲೋಕಸಭಾ ಚುನಾವಣೆಯಲ್ಲಿ ದ.ಕ.ಕ್ಷೇತ್ರದಲ್ಲಿ ಮೂರೂವರೆಯಿಂದ ನಾಲ್ಕು ಲಕ್ಷ ಮತಗಳನ್ನು ಪಡೆಯುವಲ್ಲಿ ಎಲ್ಲಾ ಪರಿವಾರ ಸಂಘಟನೆ ಒಟ್ಡಿಗೆ ಇದ್ದು ಕೆಲಸ ಮಾಡಲಿದ್ದೇವೆ ಎಂದಾಗ ಅರುಣ್ ಕುಮಾರ್ ಪುತ್ತಿಲ ಅವರ ಸೇರ್ಪಡೆ ವಿಚಾರದ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ ಉತ್ತರಿಸಿದ ಸತೀಶ್ ಕುಂಪಲ,ಪುತ್ತಿಲರ ಸೇರ್ಪಡೆ ಬಗ್ಗೆ ನಾವು ಮಾಡಿದ್ದಲ್ಲ.ಅದು ಮಾಧ್ಯಮದ ನೀವು ಕೊಟ್ಟ ಪ್ರಚಾರ.ಪುತ್ತಿಲರ ಬಗ್ಗೆಯೂ ಇಲ್ಲಿ ತುಂಬಾ ಚರ್ಚೆ ಮಾಡಿದ್ದೇವೆ.ಒಟ್ಡು ಪರಿವಾರದ ಸಂಘಟನೆ ಮತ್ತು ಬಿಜೆಪಿಯ ಎಲ್ಲರ ಒಮ್ಮತದ ಅಭಿಪ್ರಾಯ ಆಧಾರದ ಮೇಲೆ ಎಲ್ಲಾ ಕೆಲಸ ಕಾರ್ಯ ಸುಸೂತ್ರವಾಗಿ ನಡೆಯುತ್ತದೆ ಎಂದಷ್ಟೆ ಹೇಳಿದರು.

ಮಾಧ್ಯಮದವರು ಮರು ಪ್ರಶ್ನೆ ಮಾಡುತ್ತಿದ್ದಂತೆ ಅಲ್ಲಿದ್ದ ಪಕ್ಷದ ಪ್ರಮುಖರು, ಕಾರ್ಯಕರ್ತರು ಘೋಷಣೆ ಕೂಗುವ ಮೂಲಕ ಅಧ್ಯಕ್ಷ ಸತೀಶ್ ಕುಂಪಲ ಅವರನ್ನು ಅಲ್ಲಿಂದ ಕಾರಿನಲ್ಲಿ ಕುಳ್ಳಿರಿಸಿ ಕಳುಹಿಸಿಕೊಟ್ಡರು.ಪುತ್ತೂರು ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸಹಿತ ಪ್ರಮುಖರು ಇದ್ದರು.

LEAVE A REPLY

Please enter your comment!
Please enter your name here