ದಕ್ಷಿಣ ಭಾರತ ಹಿರಿಯರ ಕ್ರೀಡಾಕೂಟದಲ್ಲಿ ಪ್ರಶಸ್ತಿ

0

ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿಯ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಸ್ಟೇಡಿಯಂನಲ್ಲಿ ಮಾ.9 ಮತ್ತು 10ರಂದು ನಡೆದ 2ನೇ ದಕ್ಷಿಣ ಭಾರತ ಹಿರಿಯರ ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಹರಿಣಾಕ್ಷಿ.ಡಿ ಇವರು 100ಮೀ ಓಟ, 200 ಮೀ ಓಟ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ , 4×100 ರಿಲೇಯಲ್ಲಿ ಪ್ರಥಮ ಗಳಿಸಿರುತ್ತಾರೆ. ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಯಾಗಿರುವ ಇವರು ಪ್ರಸ್ತುತ ಕ್ಯಾಂಪ್ಕೋ ಸಂಸ್ಥೆಯ ಕಾವು ಶಾಖೆಯಲ್ಲಿ ಉದ್ಯೋಗಿಯಾಗಿರುತ್ತಾರೆ. ಇವರು ಮಹಾಬಲಡ್ಕ ದಿನೇಶ್ ಇವರ ಪತ್ನಿ.

LEAVE A REPLY

Please enter your comment!
Please enter your name here