ಪೆರ್ಲಂಪಾಡಿ ಉದಯಗಿರಿಯಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ, ಊರ ಜಾತ್ರೆ

0

ಪುತ್ತೂರು: ಕೊಳ್ತಿಗೆ ಪೆರ್ಲಂಪಾಡಿ ಉದಯಗಿರಿಯಲ್ಲಿ ಊರ ಜಾತ್ರೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.14 ಮತ್ತು 15ರಂದು ವಿಜೃಂಭಣೆಯಿಂದ ನಡೆಯಿತು.

ಮಾ.14 ರಂದು ಸಂಜೆ ಬಾಯಂಬಾಡಿ ಮಣ್ಣಾಪು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಿಂದ ದೈವದ ಭಂಡಾರವು ಸಿಆರ್.ಸಿ ಕಾಲೋನಿಯ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನಕ್ಕೆ ಬಂದು ಅಲ್ಲಿಂದ ದುರುಶನದ ಮೂಲಕ ಉದಯಗಿರಿಗೆ ತೆರಳಿತು. ಉದಯಗಿರಿ ಶ್ರೀ ವಿಷ್ಣುಮೂರ್ತಿ ಸನ್ನಿಧಿಯಲ್ಲಿ ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 11ಕ್ಕೆ ಕುಳಿಚಟ್ಟು ದೈವದ ನರ್ತನ ಸೇವೆ ನಡೆಯಿತು. ಮಾ.15 ರ ಪ್ರಾತಃಕಾಲ 4ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿಪ್ರವೇಶ ಬಳಿಕ ಮಾರಿಕಲಕ್ಕೆ ಹೋಗುವ ಕಾರ್ಯಕ್ರಮ ನಡೆದು ಸೇರಿದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಆ ಬಳಿಕ ಬೆಳಿಗ್ಗೆ 7.30ಕ್ಕೆ ಗುಳಿಗನೇಮ ನಡೆಯಿತು. ಊರಪರವೂರ ನೂರಾರು ಭಕ್ತರು ಪಾಲ್ಗೊಂಡು ಶ್ರೀ ದೈವದ ಗಂಧಪ್ರಸಾದ, ಅನ್ನಪ್ರಸಾದ ಸ್ವೀಕರಿಸಿದರು.

ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ:
ಮಾ.14ರಂದು ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಮೊದಲಿಗೆ ಗಣಪತಿ ಹೋಮ, ಕಲಶ ಪ್ರತಿಷ್ಠೆ, ಮಧ್ಯಾಹ್ನ ಮಹಾಪೂಜೆ ನಡೆದು ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.

ಸಾಂಸ್ಕೃತಿಕ ವೈವಿಧ್ಯ:
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ ಶ್ರೀ ಸಾಯಿ ಫ್ರೆಂಡ್ಸ್ ಪೆರ್ಲಂಪಾಡಿ ಇವರ ಪ್ರಾಯೋಜಕತ್ವದಲ್ಲಿ ಲಕುಮಿ ತಂಡದ ಕುಸಾಲ್ದ ಕಲಾವಿದೆರ್ ಅಭಿನಯಿಸುವ ‘ಮಗಲ್’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. ಇದಲ್ಲದೆ ಊರಿನ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ ಮನರಂಜಿಸಿತು. ಆಡಳಿತ ಸಮಿತಿಯ ಅಧ್ಯಕ್ಷ ತಾರಾಪ್ರಸಾದ್ ರಾಮಕಜೆ, ಪ್ರ.ಕಾರ್ಯದರ್ಶಿ ಗಿರೀಶ್ ಪಾದೆಕಲ್ಲು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಗಿರೀಶ್ ಮಳಿ ಹಾಗೂ ಸರ್ವ ಸದಸ್ಯರುಗಳು, ಊರಿನ ಸಮಸ್ತರು ಭಕ್ತಾಧಿಗಳನ್ನು ಸ್ವಾಗತಿಸಿ, ಪ್ರಸಾದ ನೀಡಿ ಸತ್ಕರಿಸಿದರು.

LEAVE A REPLY

Please enter your comment!
Please enter your name here