ನರಿಮೊಗರು ಪ್ರಾ.ಕೃ.ಪ ಸಹಕಾರ ಸಂಘದಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರಿಗೆ ಸನ್ಮಾನ

0

ಪುತ್ತೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಶಶಿಕುಮಾರ್ ಬಾಲ್ಯೊಟ್ಟುರವರನ್ನು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ನವೀನ್ ಡಿ. ಸನ್ಮಾನಿಸಿ ಗೌರವಿಸಿದರು. ಉಪಾಧ್ಯಕ್ಷೆ ಪವಿತ್ರ ಕೆ.ಪಿ., ನಿರ್ದೇಶಕರಾದ ವಿಶ್ವನಾಥ ಬಲ್ಯಾಯ, ಪ್ರವೀಣ್ ಶೆಟ್ಟಿ, ದೇವಪ್ಪ ಪಿ., ಜಯರಾಮ ಪೂಜಾರಿ, ದೇವಪ್ಪ ಗೌಡ, ನಮಿತಾ, ಚಂದ್ರ, ಬಾಬು ಶೆಟ್ಟಿ, ಪರಮೇಶ್ವರ ಭಂಡಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ್ ಎಚ್., ನರಿಮೊಗರು ಗ್ರಾ.ಪಂ ಸದಸ್ಯರಾದ ನವೀನ್ ರೈ ಶಿಬರ, ಕೇಶವ ಪೂಜಾರಿ ಮುಕ್ವೆ, ಮಲ್ಲಿಕಾ ಲತಾ ರೈ, ಡಿಸಿಸಿ ಬ್ಯಾಂಕ್‌ನ ಪ್ರತಿನಿಧಿ ಶರತ್ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here