ಮಾಜಿ ಮಂಡಲ ಪ್ರಧಾನ ಬೈಲುಗುತ್ತು ವಿಠ್ಠಲ ರೈ ರವರಿಗೆ ಶ್ರದ್ಧಾಂಜಲಿ

0

ಪುಣಚ : ಪುಣಚ ಗ್ರಾಮದ ಬೈಲುಗುತ್ತು ನಿವಾಸಿ ಮಾಜಿ ಮಂಡಲ ಪ್ರಧಾನ, ಪ್ರಗತಿಪರ ಕೃಷಿಕ ಬೈಲುಗುತ್ತು ವಿಠ್ಠಲ ರೈರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಪುಣಚ ಮಹಿಷಮರ್ದಿನಿ ದೇವಸ್ಥಾನದ ಶ್ರೀ ದೇವಿ ಸದನದಲ್ಲಿ ಮಾ.16ರಂದು ನಡೆಯಿತು.

ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಜಯಶ್ಯಾಂ ನೀರ್ಕಜೆ ಮಾತನಾಡಿ, ಪ್ರಗತಿಪರ ಕೃಷಿಕಾಗಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕವಾಗಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆಯನ್ನು ನೀಡಿ ಒಳ್ಳೆಯ ವ್ಯಕ್ತಿತ್ವ ಹೊಂದಿದವರಾಗಿದ್ದರು ಎಂದು ನುಡಿ ನಮನ ಸಲ್ಲಿಸಿದರು. ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ದಂಬೆಕಾನ ಸದಾಶಿವ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಮಾತನಾಡಿ ಮೃತರ ಬಗ್ಗೆ ನುಡಿ ನಮನ ಸಲ್ಲಿಸಿದರು.


ವಕೀಲರ ಸಂಘದ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಮೃತರ‌ ಜೀವನ, ವ್ಯಕ್ತಿತ್ವದ ಬಗ್ಗೆ ತಿಳಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ ಜಿಲ್ಲಾ ಕೇಂದ್ರ ಸೇವಾ ಸಹಕಾರಿ ಸಂಘದ ನಿರ್ದೇಶಕ ಶಶಿ ಕುಮಾರ್ ಬಾಲ್ಯೊಟು, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ರಾಜಾರಾಂ ಕೆಬಿ, ಪ್ರವೀಣ್ ಚಂದ್ರ ಆಳ್ವಾ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಮ್. ಎಸ್.ಮಹಮ್ಮದ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಮಾಜಿ ಜಿ. ಪಂ.ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುಣಚ ಗ್ರಾ.ಪಂ ಅಧ್ಯಕ್ಷೆ ಬೇಬಿ ಪಟಿಕಲ್ಲು, ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ, ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಕೋಶಾಧಿಕಾರಿ ಶಂಕರ ನಾರಾಯಣ ಮಲ್ಯ, ಕಾರ್ಯದರ್ಶಿ ಶ್ರೀಧರ್ ಶೆಟ್ಟಿ ದೇವರಗುಂಡಿ, ಹಾಗೂ ಹಲವಾರು ಗಣ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಬೈಲುಗುತ್ತು ಕುಟುಂಬಸ್ಥರು, ಬಂಧುಗಳು, ಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದರು. ಮೃತರ ಸಹೋದರ ಬೈಲುಗುತ್ತು ಕುಟುಂಬದ ಯಜಮಾನ ಜಗನ್ನಾಥ್ ರೈ, ಪುತ್ರರಾದ ಮನೋಜ್ ರೈ, ಮನೋರಂಜನ್ ರೈ, ಸೊಸೆ ಸವಿತಾ ಮನೋಜ್ ರೈ, ಪುತ್ರಿ ಮಂಜುಳಾ ರೈ, ಅಳಿಯ ರಾಜ್ ಶಂಕರ್ ಶೆಟ್ಟಿ, ಮೊಮ್ಮಕ್ಕಳು ಅತಿಥಿಗಳನ್ನು ಸತ್ಕರಿಸಿದರು.

ಮೌನ‌ ಪ್ರಾರ್ಥನೆ, ಪುಷ್ಪಾರ್ಚನೆ..
ಅಗಲಿದ ಬೈಲುಗುತ್ತು ವಿಠ್ಠಲ ರೈಯವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಭಗವಂತನಲ್ಲಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

LEAVE A REPLY

Please enter your comment!
Please enter your name here