ಪುತ್ತೂರು ನ್ಯಾಯಾಲಯದಲ್ಲಿ ಲೋಕ ಅದಾಲತ್

0

ಪುತ್ತೂರು:ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಮಾ.16ರಂದು ಪುತ್ತೂರಿನ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 1,444 ಪ್ರಕರಣಗಳ ಪೈಕಿ 642 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ ರೂ3,63,86,772 ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಗಿದೆ.


ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಚೆಕ್ ಬೌನ್ಸ್, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧಿಶೆ ಸರಿತಾ ಡಿ ಅವರ ನ್ಯಾಯಾಲಯದಲ್ಲಿ 29 ಪ್ರಕರಣಗಳಲ್ಲಿ 9 ಇತ್ಯರ್ಥಗೊಂಡಿದ್ದು ರೂ.18,63,073 ಪರಿಹಾರ ವಿತರಣೆಗೆ ಆದೇಶ ಆಗಿದೆ.ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧಿಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಽಕಾರಿ ಆರ್.ಪಿ ಗೌಡ ಅವರ ನ್ಯಾಯಾಲಯದಲ್ಲಿ 231 ಪ್ರಕರಣಗಳಲ್ಲಿ 118 ಇತ್ಯರ್ಥಗೊಂಡಿದ್ದು ರೂ.84,22,000 ಪರಿಹಾರ ವಿತರಣೆಗೆ ಆದೇಶ ಆಗಿದೆ.ಅಪರ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಽಶೆ ಮತ್ತು ಜೆಎಮ್‌ಎಫ್‌ ಸಿ ಪ್ರಿಯಾ ಜೋವಲೆಕರ್ ಅವರ ನ್ಯಾಯಾಲಯದಲ್ಲಿ 316 ಪ್ರಕರಣಗಳಲ್ಲಿ 220 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.1,70,24,000 ವಿತರಣೆಗೆ ಆದೇಶ ಆಗಿದೆ.ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಮ್‌ಎಫ್‌ ಸಿ ನ್ಯಾಯಾಧಿಶೆ ಅರ್ಚನಾ ಕೆ ಉನ್ನಿತಾನ್ ಅವರ ನ್ಯಾಯಾಲಯದಲ್ಲಿ 458 ಪ್ರಕರಣಗಳಲ್ಲಿ 95 ಪ್ರಕರಣಗಳು ಇತ್ಯರ್ಥಗೊಂಡಿದ್ದು ರೂ. 85,61,744 ವಿತರಣೆಗೆ ಆದೇಶ ಆಗಿದೆ.ಅಪರ ಸಿವಿಲ್ ನ್ಯಾಯಾಧಿಶ ಮತ್ತು ಜೆಎಮ್‌ಎಫ್‌ ಸಿ ಶಿವಣ್ಣ ಹೆಚ್.ಆರ್ ಅವರ ನ್ಯಾಯಾಲಯದಲ್ಲಿ 229ಪ್ರಕರಣಗಳಲ್ಲಿ 115 ಇತ್ಯರ್ಥಗೊಂಡಿದ್ದು, ರೂ.1,59,355 ವಿತರಣೆಗೆ ಆದೇಶ ಆಗಿದೆ.2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧಿಶ ಮತ್ತು ಜೆಎಮ್‌ಎಫ್‌ ಸಿ ಯೋಗೇಂದ್ರ ಶೆಟ್ಟಿ ಅವರ ನ್ಯಾಯಾಲಯದಲ್ಲಿ 1,444 ಪ್ರಕರಣಗಳಲ್ಲಿ 642 ಪ್ರಕರಣ ಇತ್ಯರ್ಥಗೊಂಡಿದ್ದು, ರೂ.3,63,86,772 ವಿತರಣೆಗೆ ಆದೇಶ ಆಗಿದೆ.


ಪ್ರಕರಣಗಳ ಇತ್ಯರ್ಥಕ್ಕೆ ಸಂಧಾನಕಾರರಾಗಿ ನ್ಯಾಯವಾದಿಗಳಾದ ಮಮತಾ ಸುವರ್ಣ ಬಿ, ಚಿದಾನಂದ ರೈ ಕೆ, ರಮ್ಲಾತ್ ಎಮ್, ಲೇಖಾಶ್ರೀ ಬಿ, ಸಂತೋಷ್ ಕೆ.ಆರ್, ಚರಣ್ ಕುಮಾರ್ ಕೆ ಅವರು ಸಹಕರಿಸಿದರು.ಸದ್ರಿ ವ್ಯಾಜ್ಯಗಳಲ್ಲಿ ಸಂಧಾನಕಾರ ವಕೀಲರನ್ನು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ.ಅವರು ನೇಮಕ ಮಾಡಿದ್ದರು.
ಮೆಗಾ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ, ಚೆಕ್ ಬೌನ್ಸ್, ವಿಮಾ ಹಣದ ಪ್ರಕರಣ, ಬ್ಯಾಂಕ್ ಹಾಗೂ ಇತರ ಕಂಪನಿಗಳೊಂದಿಗೆ ಇರುವ ವ್ಯಾಜ್ಯಗಳಲ್ಲಿ ಕಕ್ಷಿದಾರರು ಒಪ್ಪುವ ರೀತಿಯಲ್ಲಿ ಇತ್ಯರ್ಥ ಮಾಡುವ ಪ್ರಯತ್ನ ನಡೆಯಿತು.

LEAVE A REPLY

Please enter your comment!
Please enter your name here