ರಾಜೀವ್‌ಗಾಂಧಿ ಜ್ಯೋತಿ ಯಾತ್ರಾ ಸಮಿತಿ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಬಗ್ಗುಮೂಲೆ ನೇಮಕ

0

ಪುತ್ತೂರು: ರಾಜೀವ್‌ಗಾಂಧಿ ಜ್ಯೋತಿಯಾತ್ರಾ ಸಮಿತಿ ಇದರ ರಾಜ್ಯ ಕಾರ್ಯದಶಿಯಾಗಿ ದ ಕ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಕಾರ್ಯದರ್ಶಿಯಾಗಿದ್ದ ಕಬಕ ಗ್ರಾಮದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆಯವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.


ಕಾಂಗ್ರೆಸ್ ಪಕ್ಷದ ಪ್ರಚಾರ ಹಾಗೂ ಮಾಜಿ ಪ್ರಧಾನಿ ದಿ ರಾಜೀವ ಗಾಂಧಿಯವರ ಬಗ್ಗೆ ರಾಜ್ಯಾದ್ಯಂತ ಯುವಜನತೆ ಹಾಗೂ ವಿದ್ಯಾರ್ಥಿ ಸಮೂಹ ಹಾಗು ಸಾರ್ವಜನಿಕರಲ್ಲಿ ಮಾಹಿತಿ ನೀಡುವ ಈ ಪ್ರಚಾರ ಯಾತ್ರೆಯು ಪ್ರತೀ ವರ್ಷಕ್ಕೊಮ್ಮೆ ಕರ್ನಾಟಕದಾದ್ಯಂತ ಸಂಚರಿಸುತ್ತದೆ. ಕೆಪಿಸಿಸಿ ಅಧೀನದಲ್ಲಿ ಒಳಪಡುವ ಈ ಸಮಿತಿಯಲ್ಲಿ ಆರ್ ದೊರೈಯವರು ಚೆಯರ್‌ಮೆನ್ ಆಗಿರುತ್ತಾರೆ. ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರ ಶಿಫಾರಸ್ಸಿನಂತೆ ಈ ನೇಮಕಾತಿ ನಡೆದಿದೆ.


ಹನೀಫ್ ಬಗ್ಗುಮೂಲೆಯವರು ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ಕಾರ್ಯದರ್ಶಿಯಾಗಿ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ, ಕಬಕ ಸರಕಾರಿ ಹಿ ಪ್ರಾ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಕಬಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಎಸ್‌ಎಂಎ ಇದರ ಉಪಾಧ್ಯಕ್ಷರಾಗಿ, ಎಂಜೆಎಂ ಇದರ ಪ್ರಧಾನ ಕಾರ್ಯದರ್ಶಿಯಾಗಿ, ವಿಎಸ್‌ಆರ್ ಆಂಗ್ಲ ಮಾಧ್ಯಮ ಶಾಲೆಯ ಕಾನೂನು ಸಲಹೆಗಾರರಾಗಿ, ಮತ್ತು ಬಗ್ಗುಮೂಲೆ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಮುಖ್ಯಸ್ಥರಾಗಿ ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here