ನೀತಿಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲೇ ಪುಂಡಾಟಿಕೆ ಮೆರೆದ ಶಾಸಕರ ಬೆಂಬಲಿಗರನ್ನು ಬಿಡುಗಡೆ ಮಾಡಿರುವುದು ಯಾವ ನ್ಯಾಯ – ಸಂಜೀವ ಮಠಂದೂರು ಪ್ರಶ್ನೆ

0

ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ನೀತಿಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲೇ ಬಿಜೆಪಿ ಕಾರ್ಯಕರ್ತರ ಮನೆಗೆ ಅಕ್ರಮಪ್ರವೇಶ ಮಾಡಿ ಪುಂಡಾಟಿಕೆ ಮೆರೆದ ಶಾಸಕರ ಬೆಂಬಲಿಗರನ್ನು ಪೊಲೀಸರು ಬಂಧಿಸಿ ತಕ್ಷಣ ಬಿಡುಗಡೆ ಮಾಡಿರುವುದು ಯಾವ ನ್ಯಾಯ. ಸಾಮಾನ್ಯರಿಗೊಂದು ನ್ಯಾಯ ಅಧಿಕಾರದ ದರ್ಪಕ್ಕೊಂದು ನ್ಯಾಯವೇ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಪ್ರಶ್ನಿಸಿದ್ದಾರೆ.

ಅವರು ನೊಂದ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ ಮನೆಗೆ ಭೇಟಿ ನೀಡಿ ಮನೆಮಂದಿಗೆ ದೈರ್ಯ ತುಂಬಿದರು. ಬಳಿಕ ಅಲ್ಲಿಂದಲೇ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗೆ ಕರೆ ಮಾಡಿ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಆರೋಪಿಗಳನ್ನು ಬಂಧನ ಮಾಡಿ ಯಾವ ಆದರದ ಮೇಲೆ ಬಿಡುಗಡೆಗೊಳಿಸಿದ್ದೀರಿ ಪ್ರಶ್ನಿಸಿದರು. ಶಾಸಕರು ತಮ್ಮ ಅಧಿಕಾರದ ದರ್ಪವನ್ನು ಜನಸಾಮಾನ್ಯರ ಮೇಲೆ ಹೇರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಗರ ಸಭಾ ಸ್ಥಳೀಯ ಸದಸ್ಯ ಸುಂದರ ಪೂಜಾರಿ ಬಡಾವು, ಬಿಜೆಪಿ ಪುತ್ತೂರು ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಾಡಿ, ಬಿಜೆಪಿ ಮಾಜಿ ಹಿಂದುಳಿದ ವರ್ಗಗಳ ಸದಸ್ಯ ಪುರುಷೋತ್ತಮ ಬಂಗೇರ ಮತ್ತು ಕಾರ್ಯಕರ್ತರು ಜೊತೆಗಿದ್ದರು.

LEAVE A REPLY

Please enter your comment!
Please enter your name here