ದಿವ್ಯಾಂಗ ಚೇತನ ಮಕ್ಕಳಿಗೆ ಕವಿಗೋಷ್ಠಿಗೆ ಆಹ್ವಾನ

0

ಪುತ್ತೂರು: ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ದ್ವಿತೀಯ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏಪ್ರಿಲ್ ತಿಂಗಳಲ್ಲಿ ನಡೆಯುವ ಕವಿಗೋಷ್ಠಿಗೆ ದಿವ್ಯಾಂಗ ಚೇತನ ಮಕ್ಕಳಿಗಾಗಿ ಕವಿಗೋಷ್ಠಿ ಏರ್ಪಡಿಸಲಾಗಿದೆ.

ಈ ಗೋಷ್ಠಿ ಕೇವಲ ದಿವ್ಯಾಂಗ ಚೇತನದವರಿಗಾಗಿ ಆಯೋಜಿಸಲಾಗಿದ್ದು, ಮೊದಲು ನೋಂದಾಯಿಸಿದ 25 ಮಂದಿಗೆ ಮಾತ್ರ ಅವಕಾಶ. ಅಲ್ಲದೇ ಕವನ ವಾಚನಕ್ಕೆ ಮಾತ್ರ ಅವಕಾಶ. ಬೇರೆ ಯಾವುದೇ ನೃತ್ಯ, ಹಾಡುಗಳಿಗೆ ಅವಕಾಶವಿಲ್ಲ. ಭಾಗವಹಿಸುವ ದಿವ್ಯಾಂಗ ಚೇತನ ವಿದ್ಯಾರ್ಥಿಗಳಿಗೆ ಅಂದು ಬಿಡುಗಡೆಯಾಗುವ ಕವನ ಸಂಕಲನದಿಂದ ಯಾವುದೇ ಕವನ ವಾಚಿಸಬಹುದು. ಭಾಗವಹಿಸುವವರು ಎ.7 ರ ಒಳಗಾಗಿ ಸುಪ್ರೀತಾ ಚರಣ್ ಪಾಲಪ್ಪೆ ಇವರ ವಾಟ್ಸಪ್ಪ್ ಸಂಖ್ಯೆ:8971271027 ಮಾಹಿತಿ ನೀಡುವಂತೆ ಚಿಗುರೆಲೆ ಸಾಹಿತ್ಯ ಬಳಗದ ಸ್ಥಾಪಕಾಧ್ಯಕ್ಷ ಚಂದ್ರಮೌಳಿ ಕಡಂದೇಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here