ನಮ್ಮ ಕಾರ್ಯಕರ್ತರಿಗೆ ತೊಂದರೆಯಾದಲ್ಲಿ ಪಕ್ಷ ಖಂಡಿತವಾಗಿಯೂ ಬಿಟ್ಟು ಕೊಡುವುದಿಲ್ಲ-ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

0

ಪುತ್ತೂರು: ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿ, ಮನೆಯಲ್ಲಿದ್ದವರಿಗೆ ಬೆದರಿಕೆಯೊಡ್ಡಿರುವ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಜಿಲ್ಲಾ ಸದಸ್ಯ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ‘ಶ್ರೀ ಗುರುಕೃಪಾ’ದ ಕೃಷ್ಣಪ್ಪ ಪೂಜಾರಿಯವರ ಪುತ್ರ ಜಯಾನಂದ ಕೆ ಅವರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಾ.19ರಂದು ಭೇಟಿ ನೀಡಿ ಮನೆ ಮಂದಿಗೆ ಧೈರ್ಯ ತುಂಬಿದ್ದಾರೆ.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮ ಕಾರ್ಯಕರ್ತರಿಗೆ ತೊಂದರೆ ಆದರೆ ಪಕ್ಷ ಖಂಡಿತವಾಗಿಯೂ ನಮ್ಮವರನ್ನು ಬಿಟ್ಟು ಕೊಡುವುದಿಲ್ಲ.ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಪ್ರಶ್ನೆಗೆ ಅದೇ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕೊಡಬಹುದಿತ್ತು.ಕಾಂಗ್ರೆಸ್ ಶಾಸಕರ ದಬ್ಬಾಳಿಕೆ ನಮ್ಮ ಕಾರ್ಯಕರ್ತರ ಮೇಲೆ ಆಗಿದೆ.ಇದು ಶಾಸಕರ ಕಾರ್ಯವೈಖರಿಯನ್ನು ತೋರಿಸುತ್ತದೆ.ಇದಕ್ಕೆ ಮುಂದಿನ ದಿನ ಜನರು ಉತ್ತರ ಕೊಡಲಿದ್ದಾರೆ.ಜಾಮೀನು ಪಡೆದು ಮತ್ತೆ ದಬ್ಬಾಳಿಕೆ ಮಾಡುವವರನ್ನು ಪೊಲೀಸರು ಮತ್ತೆ ಕರೆಸಿ ಎಚ್ಚರಿಕೆ ನೀಡಬೇಕು ಎಂದರು.


ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಒಬಿಸಿ ಕಾರ್ಯದರ್ಶಿ ಆರ್ ಸಿ ನಾರಾಯಣ್, ಮಂಗಳೂರು ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯ್ತೋಡಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಹಜ್ ಬಳಜ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here