ಹೊಸಮಜಲು: ಉಚಿತ ಆರೋಗ್ಯ ತಪಾಸಣೆ ಶಿಬಿರ

0

ಆರೋಗ್ಯವಂತ ಸಮಾಜಕ್ಕೆ ವೈದ್ಯಕೀಯ ಶಿಬಿರಗಳು ಅತೀ ಅವಶ್ಯ-ಲೋಕೇಶ್ ಬಾಣಜಾಲು

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೌಕ್ರಾಡಿ, ವರ್ತಕರ ಸಂಘ ಕೌಕ್ರಾಡಿ-ನೆಲ್ಯಾಡಿ, ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಕೌಕ್ರಾಡಿ ಗ್ರಾ.ಪಂ.ಹಾಗೂ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲಾ ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಾಗಾರ ಹಾಗೂ ಉಚಿತ ಔಷಧಿ ವಿತರಣಾ ಶಿಬಿರ ಮಾ.17ರಂದು ಕೌಕ್ರಾಡಿ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.


ಶಿಬಿರ ಉದ್ಘಾಟಿಸಿದ ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಲೋಕೇಶ್ ಬಾಣಜಾಲುರವರು ಮಾತನಾಡಿ, ನಾವುಗಳು ಆರೋಗ್ಯವಂತರಾಗಿರಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜನೆ ಮಾಡುವುದು ಅತೀ ಅವಶ್ಯಕವಾಗಿದೆ ಎಂದರು. ನೆಲ್ಯಾಡಿ ಜೇಸಿಐ ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಅಧ್ಯಕ್ಷತೆ ವಹಿದ್ದರು. ವೇದಿಕೆಯಲ್ಲಿ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಶ್ವಾಸಕೋಶ ತಜ್ಞರಾದ ಡಾ.ವಿಘ್ನೇಶ್, ನೆಲ್ಯಾಡಿ-ಕೌಕ್ರಾಡಿ ವರ್ತಕ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್., ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಹೊಸಮಜಲು ಅಶ್ವತ್ಥ ಗೆಳೆಯರ ಬಳಗದ ಅಧ್ಯಕ್ಷ ವಂದನ್ ಕುಮಾರ್, ಹೊಸಮಜಲು ಸರಕಾರಿ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕಿ ಪ್ರೇಮ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಹೊಸಮಜಲು ಸರಕಾರಿ ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಆಶಿಕ್ ಇಸ್ಮಾಯಿಲ್ ಉಪಸ್ಥಿತರಿದ್ದರು. ರವೀಂದ್ರ ಟಿ. ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ನಮಿತಾ ಎಸ್ ಶೆಟ್ಟಿ ಪ್ರಾರ್ಥಿಸಿದರು, ವಿನ್ಯಾಸ್ ಬಂಟ್ರಿಯಾಲ್ ಜೇಸಿವಾಣಿ ವಾಚಿಸಿದರು. ಸತೀಶ್ ಕೆ.ಎಸ್ ಸ್ವಾಗತಿಸಿದರು, ಜಯಾನಂದ ಬಂಟ್ರಿಯಾಲ್ ನಿರೂಪಿಸಿ ವಂದಿಸಿದರು. ಮಧ್ಯಾಹ್ನದ ತನಕ ನಡೆದ ಶಿಬಿರದಲ್ಲಿ ೧೭೫ಕ್ಕಿಂತಲೂ ಅಧಿಕ ಮಂದಿ ಆರೋಗ್ಯ ತಪಾಸಣೆ ಮಾಡಿಕೊಂಡರು

LEAVE A REPLY

Please enter your comment!
Please enter your name here