ಕೊಣಾಲು: ಕಡೆಂಬಿಲತ್ತಾಯ ಗುಡ್ಡೆ ದೈವಗಳ ಪ್ರತಿಷ್ಠಾ ಮಹೋತ್ಸವ

0

ನೆಲ್ಯಾಡಿ: ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಚಕ್ರವರ್ತಿ ಕೊಡಮಣಿತ್ತಾಯಿ ಮತ್ತು ಪರಿವಾರ ದೈವಗಳ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಮಾ.20ರಂದು ನಡೆಯಿತು.

ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಕಡೆಂಬಿಲ ನಾಗಬನದಲ್ಲಿ ನಾಗತಂಬಿಲ, ದೈವಸ್ಥಾನದಲ್ಲಿ ಗಣಹೋಮ, ಕಲಶಪೂಜೆ ನಡೆದು ದೈವಗಳಿಗೆ ಕಲಶಾಭಿಷೇಕ, ತಂಬಿಲ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಅರ್ಚಕರಾದ ಸುಕುಮಾರ ಯಡಪಡಿತ್ತಾಯ ಕೊಕ್ಕಡ, ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ರೈ ಕೊಣಾಲುಗುತ್ತು, ಉಪಾಧ್ಯಕ್ಷ ಜಗದೀಶ್ ಶೆಟ್ಟಿ ಕಡೆಂಬಿಲ, ಕಾರ್ಯದರ್ಶಿ ಚಂದಪ್ಪ ಗೌಡ ಕಾಯರ್ತಡ್ಕ, ಜೊತೆ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಕಲಾಯಿ, ಕೋಶಾಧಿಕಾರಿ ಧರ್ಣಪ್ಪ ಗೌಡ ಕೋಲ್ಪೆ, ಸದಸ್ಯರಾದ ಪ್ರಕಾಶ್ ಸುವರ್ಣ ಕುರುಂಬೊಟ್ಟು, ವಿಶ್ವನಾಥ ಪೂಜಾಡಿ ಪಾಂಡಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here