ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ಜಿಲ್ಲಾ ಧಾರ್ಮಿಕ ಪರಿಷತ್ ಆದ ಬಳಿಕ ಪ್ರಥಮ ಬಾರಿಗೆ ಶಿವನಾಥ ರೈ ಮೇಗಿನಗುತ್ತು ಅವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಶಿವನಾಥ ರೈ ಮೇಗಿನಗುತ್ತು ಅವರಿಗೆ ಪ್ರಸಾದ ನೀಡಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ಶಲ್ಯ ಹೊದಿಸಿ ಗೌರವಿಸಿದರು. ಆರ್ಯಾಪು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಪೂರ್ಣಿಮ ರೈ, ಮುಂಡೂರು ಗ್ರಾಮ ಪಂಚಾಯತ್ ಸದಸ್ಯೆ ರಸಿಕ ರೈ, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಪವಿತ್ರ ರೈ ಬಾಳಿಲ, ಜೀವನ್ ಕಲ್ಲಿಮಾರ್, ಉಮೇಶ್ ರೈ ಕೈಕಾರ, ಸತೀಶ್ ಮತ್ತು ದೇವಸ್ಥಾನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here