ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಹಾರ್ಮೋನಿಯಂ ವಾದನದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಂತ ವೈ ಪ್ರಥಮ

0

ಕಾಣಿಯೂರು: ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲೆ ಇವರ ಆಶ್ರಯದಲ್ಲಿ ಮಂಗಳೂರಿನ ಸರ್ಕಾರಿ ನೌಕರರ ಭವನದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ವಿಂಡ್ ವಾದ್ಯ ಸ್ಪರ್ಧೆಯಲ್ಲಿ ಹಾರ್ಮೋನಿಯಂ ವಾದನದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೊಂಡಾಡಿಕೊಪ್ಪ ಶಾಲಾ ಮುಖ್ಯ ಗುರು ಜಯಂತ ವೈ ಯವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ಅಲ್ಲದೇ ಇವರು ಜಾನಪದ ಗೀತೆ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡರು. ಇವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ ಕೃಷ್ಣ ರವರು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಿದರು. ಜಯಂತ ವೈ ಯವರು ಸತತ ಮೂರು ವರ್ಷಗಳಿಂದ ಸರ್ಕಾರಿ ನೌಕರರ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಿಕ್ಷಣ ಇಲಾಖೆಗೆ ಗೌರವ ತಂದಿರುತ್ತಾರೆ.

LEAVE A REPLY

Please enter your comment!
Please enter your name here